ಸೋಮವಾರ ಇಲ್ಲಿ ನಡೆದ ಸಮಾಜದ ವಿಭಾಗೀಯ ಸಭೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜದ ಸ್ವಾಮೀಜಿಗಳು ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸುವಂತೆ ಕೋರಿದ್ದಾರೆ. ನಾನು ಕೂಡ ವೈಯಕ್ತಿಕವಾಗಿ ಅವರನ್ನು ಹೋರಾಟಕ್ಕೆ ಆಹ್ವಾನಿಸಿ
ದ್ದೇನೆ. ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುವುದಿಲ್ಲ ಎಂದು ಅವರೂ ತಿಳಿಸಿದ್ದಾರೆ. ಹೀಗಾಗಿ ಹೋರಾಟ ದಾರಿ ತಪ್ಪುವ ಪ್ರಶ್ನೆಯೇ ಇಲ್ಲ’ ಎಂದರು.