<p><strong>ಬೆಂಗಳೂರು: ‘</strong>ಡಿ.5ರಂದು ಕರ್ನಾಟಕ ಬಂದ್ ನಡೆಸಲು ಯಾರೂ ಅನುಮತಿ ಕೇಳಿಲ್ಲ. ಪೊಲೀಸ್ ಇಲಾಖೆಯೂ ಅನುಮತಿ ನೀಡಿಲ್ಲ. ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ನಾಳೆ ಯಾವುದೇ ರ್ಯಾಲಿ ನಡೆಸಲು ಅವಕಾಶ ನೀಡಿಲ್ಲ. ಬಂದ್ಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬೆಂಬಲ ನೀಡಿಲ್ಲ. ಬಸ್ಗಳನ್ನು ತಡೆಯುವಂತಿಲ್ಲ.ಸಾರ್ವಜನಿಕರು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಬಹುದು’ಎಂದರು.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ ರೌಡಿಶೀಟರ್ಗಳ ಮೇಲೆ ನಿಗಾವಹಿಸಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ಎಂದು ಎಚ್ಚರಿಸಿದರು.</p>.<p><strong>ಭದ್ರತೆಗೆ 15 ಸಾವಿರ ಪೊಲೀಸರು:</strong>‘ಅನಾವಶ್ಯಕವಾಗಿ ಬಂದ್ ಮಾಡುವುದನ್ನು ತಡೆಯಲು ಹಾಗೂ ಭದ್ರತೆಗಾಗಿ 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಡಿಸಿಪಿಗಳು ಹಾಗೂ ಹೊಯ್ಸಳ ವಾಹನಗಳು ನಗರವೆಲ್ಲಾ ಸುತ್ತಲಿವೆ. 33 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ’ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಡಿ.5ರಂದು ಕರ್ನಾಟಕ ಬಂದ್ ನಡೆಸಲು ಯಾರೂ ಅನುಮತಿ ಕೇಳಿಲ್ಲ. ಪೊಲೀಸ್ ಇಲಾಖೆಯೂ ಅನುಮತಿ ನೀಡಿಲ್ಲ. ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ನಾಳೆ ಯಾವುದೇ ರ್ಯಾಲಿ ನಡೆಸಲು ಅವಕಾಶ ನೀಡಿಲ್ಲ. ಬಂದ್ಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬೆಂಬಲ ನೀಡಿಲ್ಲ. ಬಸ್ಗಳನ್ನು ತಡೆಯುವಂತಿಲ್ಲ.ಸಾರ್ವಜನಿಕರು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಬಹುದು’ಎಂದರು.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ ರೌಡಿಶೀಟರ್ಗಳ ಮೇಲೆ ನಿಗಾವಹಿಸಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ಎಂದು ಎಚ್ಚರಿಸಿದರು.</p>.<p><strong>ಭದ್ರತೆಗೆ 15 ಸಾವಿರ ಪೊಲೀಸರು:</strong>‘ಅನಾವಶ್ಯಕವಾಗಿ ಬಂದ್ ಮಾಡುವುದನ್ನು ತಡೆಯಲು ಹಾಗೂ ಭದ್ರತೆಗಾಗಿ 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಡಿಸಿಪಿಗಳು ಹಾಗೂ ಹೊಯ್ಸಳ ವಾಹನಗಳು ನಗರವೆಲ್ಲಾ ಸುತ್ತಲಿವೆ. 33 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ’ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>