ಮಸೀದಿಯ ಸುತ್ತ ಬ್ಯಾರಿಕೇಡ್ ಹಾಕಲಾಗಿದ್ದು 3 ಕೆಎಸ್ಆರ್ಪಿ, 5 ಡಿಎಆರ್ ತುಕಡಿಗಳು ಭದ್ರತೆಗೆ ನಿಯೋಜಿಸಲಾಗಿದೆ. ನಿಷೇಧಾಜ್ಞೆ ಜಾರಿ ಇರುವ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ, ಜಾಥಾ, ಪ್ರತಿಭಟನೆ, ರಥಯಾತ್ರೆ, ಉತ್ಸವ, ಮೆರವಣಿಗೆಗಳಿಗೆ ಅವಕಾಶ ಇರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಶ್ರೀರಂಗಪಟ್ಟಣದಲ್ಲಿ ನಡೆಯಬೇಕಿದ್ದ ಸಂತೆಯನ್ನು ಸ್ಥಳೀಯ ಪುರಸಭೆ ಭಾನುವಾರಕ್ಕೆ ಮುಂದೂಡಿದೆ.