‘ರಾಜ್ಯದಲ್ಲಿ ಕಲ್ಲಿದ್ದಲು ಸರಬರಾಜು ಕೊರತೆ ಇದೆ ಎನ್ನುವುದು ಕಾಂಗ್ರೆಸ್ ಸೃಷ್ಟಿಸಿದ ಸುಳ್ಳು. ಕಲ್ಲಿದ್ದಲು ಸರಬರಾಜು ಆಗುತ್ತಿಲ್ಲ ಎಂಬುದು ಕಪೋಲಕಲ್ಪಿತ ಸುದ್ದಿ. ವಿದ್ಯುತ್ ಕೊರತೆ ನೀಗಿಸಲು ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಎಲ್ಲವನ್ನೂ ವ್ಯವಸ್ಥಿತವಾಗಿ ನಡೆಸಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ಪವನಶಕ್ತಿ ಹೆಚ್ಚು ಉತ್ಪಾದನೆಯಾಗುತ್ತಿದೆ. ಹೀಗಾಗಿ ಲೋಡ್ ಶೆಡ್ಡಿಂಗ್ ತೊಂದರೆ ಆಗಿಲ್ಲ. ಯಾವುದೇ ಕಾರಣಕ್ಕೂ ಅಂತಹ ಪರಿಸ್ಥಿತಿ ಎದುರಾಗದು. ಅನಗತ್ಯವಾಗಿ ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸುತ್ತಿದೆ’ ಎಂದು ಸಚಿವರು ಹೇಳಿದ್ದಾರೆ.