ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವವಿಲ್ಲದೇ ತಬ್ಬಲಿಯಾದ ಕಾಂಗ್ರೆಸ್‌: ಯಡಿಯೂರಪ್ಪ

Last Updated 15 ಡಿಸೆಂಬರ್ 2022, 11:30 IST
ಅಕ್ಷರ ಗಾತ್ರ

ಕೊಪ್ಪಳ: ನಾಯಕತ್ವದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್‌ ಈಗ ಕಷ್ಟಪಟ್ಟು ಉಸಿರಾಡುತ್ತಿದೆ. 2023ರ ವಿಧಾನಸಭಾ ಚುನಾವಣೆಯ ಬಳಿಕ ಪೂರ್ಣ ಉಸಿರು ಕಳೆದುಕೊಂಡು ದೂಳೀಪಟ ಆಗಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಐದು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಪಕ್ಷದ ಕೈ ಬಲಪಡಿಸಬೇಕು. ಪಕ್ಷದ ಕಾರ್ಯಕರ್ತರು ಬಿಜೆಪಿ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಕಾಂಗ್ರೆಸ್‌ ನಾಯಕತ್ವವಿಲ್ಲದೆ ತಬ್ಬಲಿಯಂತೆ ಅಲೆದಾಡುತ್ತಿದೆ ಎಂದರು.

‘ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅಧಿಕಾರಕ್ಕೆ ಬರುವ ಮೊದಲೇ ಮುಖ್ಯಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರಿಗೆ ಅಧಿಕಾರ ಸಿಗುವುದಿಲ್ಲ. ಬಿಜೆಪಿಯಲ್ಲಿ ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇದ್ದೇವೆ. ಪಕ್ಷವನ್ನು ಮುಂದೆ ಅಧಿಕಾರಕ್ಕೆ ತರುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT