ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತ ಮಕ್ಕಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆಯ ಪ್ರಸ್ತಾವ ಇಲ್ಲ: ಸಿಎಂ

ಅಲ್ಪಸಂಖ್ಯಾತ ಮಕ್ಕಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ
Last Updated 1 ಡಿಸೆಂಬರ್ 2022, 18:00 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ಆರಂಭಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಭದ್ರಾವತಿ ಸಮೀಪದ ಕಾರೇಹಳ್ಳಿಯಲ್ಲಿ ಬಿಜಿಎಸ್‌ ಕೇಂದ್ರೀಯ ವಿದ್ಯಾಲಯ ಗುರುವಾರ ಹಮ್ಮಿಕೊಂಡಿದ್ದ ಕ್ರೀಡಾಕೂಟ ಉದ್ಘಾಟಿಸಲು ಬಂದಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಪ್ರತ್ಯೇಕ ಶಿಕ್ಷಣ ಸಂಸ್ಥೆ ವಿಚಾರ ಯಾರು ಹೇಳಿದ್ದಾರೋ ಗೊತ್ತಿಲ್ಲ. ಹಿಜಾಬ್ ವಿವಾದದ ನಂತರ ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗಿಲ್ಲ. ಮೊದಲಿನಂತೆಯೇ ಮಕ್ಕಳು ಕಲಿಯಲು ಬರುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT