<p><strong>ಹುಬ್ಬಳ್ಳಿ: </strong>ನೂತನ ಪಿಂಚಣಿ ಯೋಜನೆಯಲ್ಲಿ ಮಾರ್ಪಾಡು ಮಾಡುವ ಕುರಿತು ಪರಿಶೀಲಿಸಲು ಸರ್ಕಾರ ಅಧಿಕಾರಿಗಳ ಸಮಿತಿಯನ್ನು ರಚಿಸಿ ಮೂರು ವರ್ಷಗಳಾಗಿದ್ದರೂ ಇದುವರೆಗೆ ವರದಿ ಸಲ್ಲಿಕೆಯಾಗದಿರುವುದಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ನೂತನ ಪಿಂಚಣಿ ಯೋಜನೆಯ ಮಾರ್ಪಾಡು ಸಮಿತಿಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.</p>.<p class="Subhead"><strong>ಪತ್ರದಲ್ಲೇನಿದೆ?:2</strong>006ಕ್ಕಿಂತ ಮುಂಚಿನ ಸರ್ಕಾರಿ, ಅನುದಾನಿತ ಸಿಬ್ಬಂದಿಯ ವೇತನ ಹಾಗೂ ಇತರ ಸೌಲಭ್ಯಗಳು ಒಂದೇ ರೀತಿಯಾಗಿದ್ದವು. ನೂತನ ಪಿಂಚಣಿ ಆದೇಶದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯ ವಂತಿಗೆಯನ್ನು ಆಡಳಿತ ಮಂಡಳಿಗಳೇ ತುಂಬಬೇಕೆಂದು ಆದೇಶಿಸಲಾಗಿದೆ. ಇದರಿಂದಾಗಿ ಅಲ್ಲಿ ನೂತನ ಪಿಂಚಣಿ ಯೋಜನೆ ಜಾರಿಗೊಂಡಿಲ್ಲ.</p>.<p>ಅನುದಾನಿತ ಸಿಬ್ಬಂದಿಯ ಪಿಂಚಣಿ ಪಾವತಿಯನ್ನು ಆಡಳಿತ ಮಂಡಳಿಗಳಿಗೆ ವಹಿಸಿರುವುದು ಸಂವಿಧಾನ ವಿರೋಧಿ<br />ಯಾಗಿದೆಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನೂತನ ಪಿಂಚಣಿ ಯೋಜನೆಯಲ್ಲಿ ಮಾರ್ಪಾಡು ಮಾಡುವ ಕುರಿತು ಪರಿಶೀಲಿಸಲು ಸರ್ಕಾರ ಅಧಿಕಾರಿಗಳ ಸಮಿತಿಯನ್ನು ರಚಿಸಿ ಮೂರು ವರ್ಷಗಳಾಗಿದ್ದರೂ ಇದುವರೆಗೆ ವರದಿ ಸಲ್ಲಿಕೆಯಾಗದಿರುವುದಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ನೂತನ ಪಿಂಚಣಿ ಯೋಜನೆಯ ಮಾರ್ಪಾಡು ಸಮಿತಿಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.</p>.<p class="Subhead"><strong>ಪತ್ರದಲ್ಲೇನಿದೆ?:2</strong>006ಕ್ಕಿಂತ ಮುಂಚಿನ ಸರ್ಕಾರಿ, ಅನುದಾನಿತ ಸಿಬ್ಬಂದಿಯ ವೇತನ ಹಾಗೂ ಇತರ ಸೌಲಭ್ಯಗಳು ಒಂದೇ ರೀತಿಯಾಗಿದ್ದವು. ನೂತನ ಪಿಂಚಣಿ ಆದೇಶದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯ ವಂತಿಗೆಯನ್ನು ಆಡಳಿತ ಮಂಡಳಿಗಳೇ ತುಂಬಬೇಕೆಂದು ಆದೇಶಿಸಲಾಗಿದೆ. ಇದರಿಂದಾಗಿ ಅಲ್ಲಿ ನೂತನ ಪಿಂಚಣಿ ಯೋಜನೆ ಜಾರಿಗೊಂಡಿಲ್ಲ.</p>.<p>ಅನುದಾನಿತ ಸಿಬ್ಬಂದಿಯ ಪಿಂಚಣಿ ಪಾವತಿಯನ್ನು ಆಡಳಿತ ಮಂಡಳಿಗಳಿಗೆ ವಹಿಸಿರುವುದು ಸಂವಿಧಾನ ವಿರೋಧಿ<br />ಯಾಗಿದೆಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>