<p><strong>ಬೆಂಗಳೂರು: </strong>ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಾರಿಗೆ ಸಂಸ್ಥೆಗಳಲ್ಲಿ ನೌಕರರಿಗೆ ಸಂಬಳ ಕೊಡುವಷ್ಟು ವರಮಾನ ಇನ್ನೂ ಸಂಗ್ರಹವಾಗುತ್ತಿಲ್ಲ. ವೇತನಕ್ಕೆ ಅನುದಾನ ಕೋರಿರುವ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲೇ ಬಾಕಿ ಇದ್ದು, ನವರಾತ್ರಿ ಹಬ್ಬವನ್ನು ನೌಕರರು ಬರಿಗೈನಲ್ಲೇ ಬರಮಾಡಿಕೊಳ್ಳಬೇಕಾದ ಸ್ಥಿತಿ ಇದೆ.</p>.<p>ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರತಿನಿತ್ಯ ಪ್ರಯಾಣಿಕರ ಸಂಖ್ಯೆ ಕೋವಿಡ್ ಪೂರ್ವದಲ್ಲಿ 30 ಲಕ್ಷ ಇತ್ತು. ದಿನದ ವರಮಾನ ₹ 9.50 ಕೋಟಿ ಇತ್ತು. ಸದ್ಯ ಪ್ರಯಾಣಿಕರ ಸಂಖ್ಯೆ ಸರಾಸರಿ 19 ಲಕ್ಷ ಇದ್ದರೆ, ವರಮಾನ ₹6.50 ಕೋಟಿ ಇದೆ.</p>.<p>ಬಿಎಂಟಿಸಿ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಕೋವಿಡ್ ಪೂರ್ವದಲ್ಲಿ ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದರು. ₹3.5 ಕೋಟಿ ವರಮಾನ ಸಂಗ್ರಹ ಆಗುತ್ತಿತ್ತು. ಈಗ ಪ್ರಯಾಣಿಕರ ಸಂಖ್ಯೆ 17 ಲಕ್ಷದಿಂದ 20 ಲಕ್ಷದ ತನಕ ಇದೆ. ವರಮಾನ ಸಂಗ್ರಹ ₹2.2 ಕೋಟಿಯಷ್ಟಿದೆ.</p>.<p>ದುಬಾರಿಯಾಗಿರುವ ಡೀಸೆಲ್ ವೆಚ್ಚ ಮತ್ತು ನಿರ್ವಹಣೆ ವೆಚ್ಚ ಸರಿದೂಗಿಸಿಕೊಳ್ಳಲು ಈ ವರಮಾನ ಸಾಕಾಗುತ್ತಿದೆ. ಎಲ್ಲ ನೌಕರರಿಗೂ ಸ್ವಂತ ಶಕ್ತಿಯಿಂದ ಸಂಬಳ ನೀಡುಷ್ಟು ವರಮಾನ ಬರುತ್ತಿಲ್ಲ ಎನ್ನುತ್ತಾರೆ ನಿಗಮಗಳ ಅಧಿಕಾರಿಗಳು.</p>.<p>ನೌಕರರ ವೇತನ ಪಾವತಿಸಲು ಸರ್ಕಾರದ ಮುಂದೆ ಅನುದಾನಕ್ಕೆ ಸಾರಿಗೆ ಸಂಸ್ಥೆಗಳು ಕೋರಿಕೆ ಸಲ್ಲಿಸಿವೆ. ಹಣಕಾಸು ಇಲಾಖೆಯ ಮುಂದೆ ಪ್ರಸ್ತಾವನೆ ಇದ್ದು, ಮುಖ್ಯಮಂತ್ರಿ ಅವರಿಂದ ಇನ್ನೂ ಅನುಮೋದನೆ ದೊರೆತಿಲ್ಲ.</p>.<p>‘ಹಣಕಾಸು ಇಲಾಖೆ ಜೊತೆ ಮಾತು ಕತೆ ನಡೆಸಲಾಗಿದ್ದು, ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗಿದೆ. ಸರ್ಕಾರದಿಂದ ಅನುದಾನ ದೊರೆಯುವ ನಿರೀಕ್ಷೆಯಲ್ಲಿದ್ದೇವೆ. ನವರಾತ್ರಿ ಹಬ್ಬಕ್ಕೂ ಮುನ್ನ ನೌಕರರಿಗೆ ಸಂಬಳ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಾರಿಗೆ ಸಂಸ್ಥೆಗಳಲ್ಲಿ ನೌಕರರಿಗೆ ಸಂಬಳ ಕೊಡುವಷ್ಟು ವರಮಾನ ಇನ್ನೂ ಸಂಗ್ರಹವಾಗುತ್ತಿಲ್ಲ. ವೇತನಕ್ಕೆ ಅನುದಾನ ಕೋರಿರುವ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲೇ ಬಾಕಿ ಇದ್ದು, ನವರಾತ್ರಿ ಹಬ್ಬವನ್ನು ನೌಕರರು ಬರಿಗೈನಲ್ಲೇ ಬರಮಾಡಿಕೊಳ್ಳಬೇಕಾದ ಸ್ಥಿತಿ ಇದೆ.</p>.<p>ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರತಿನಿತ್ಯ ಪ್ರಯಾಣಿಕರ ಸಂಖ್ಯೆ ಕೋವಿಡ್ ಪೂರ್ವದಲ್ಲಿ 30 ಲಕ್ಷ ಇತ್ತು. ದಿನದ ವರಮಾನ ₹ 9.50 ಕೋಟಿ ಇತ್ತು. ಸದ್ಯ ಪ್ರಯಾಣಿಕರ ಸಂಖ್ಯೆ ಸರಾಸರಿ 19 ಲಕ್ಷ ಇದ್ದರೆ, ವರಮಾನ ₹6.50 ಕೋಟಿ ಇದೆ.</p>.<p>ಬಿಎಂಟಿಸಿ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಕೋವಿಡ್ ಪೂರ್ವದಲ್ಲಿ ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದರು. ₹3.5 ಕೋಟಿ ವರಮಾನ ಸಂಗ್ರಹ ಆಗುತ್ತಿತ್ತು. ಈಗ ಪ್ರಯಾಣಿಕರ ಸಂಖ್ಯೆ 17 ಲಕ್ಷದಿಂದ 20 ಲಕ್ಷದ ತನಕ ಇದೆ. ವರಮಾನ ಸಂಗ್ರಹ ₹2.2 ಕೋಟಿಯಷ್ಟಿದೆ.</p>.<p>ದುಬಾರಿಯಾಗಿರುವ ಡೀಸೆಲ್ ವೆಚ್ಚ ಮತ್ತು ನಿರ್ವಹಣೆ ವೆಚ್ಚ ಸರಿದೂಗಿಸಿಕೊಳ್ಳಲು ಈ ವರಮಾನ ಸಾಕಾಗುತ್ತಿದೆ. ಎಲ್ಲ ನೌಕರರಿಗೂ ಸ್ವಂತ ಶಕ್ತಿಯಿಂದ ಸಂಬಳ ನೀಡುಷ್ಟು ವರಮಾನ ಬರುತ್ತಿಲ್ಲ ಎನ್ನುತ್ತಾರೆ ನಿಗಮಗಳ ಅಧಿಕಾರಿಗಳು.</p>.<p>ನೌಕರರ ವೇತನ ಪಾವತಿಸಲು ಸರ್ಕಾರದ ಮುಂದೆ ಅನುದಾನಕ್ಕೆ ಸಾರಿಗೆ ಸಂಸ್ಥೆಗಳು ಕೋರಿಕೆ ಸಲ್ಲಿಸಿವೆ. ಹಣಕಾಸು ಇಲಾಖೆಯ ಮುಂದೆ ಪ್ರಸ್ತಾವನೆ ಇದ್ದು, ಮುಖ್ಯಮಂತ್ರಿ ಅವರಿಂದ ಇನ್ನೂ ಅನುಮೋದನೆ ದೊರೆತಿಲ್ಲ.</p>.<p>‘ಹಣಕಾಸು ಇಲಾಖೆ ಜೊತೆ ಮಾತು ಕತೆ ನಡೆಸಲಾಗಿದ್ದು, ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗಿದೆ. ಸರ್ಕಾರದಿಂದ ಅನುದಾನ ದೊರೆಯುವ ನಿರೀಕ್ಷೆಯಲ್ಲಿದ್ದೇವೆ. ನವರಾತ್ರಿ ಹಬ್ಬಕ್ಕೂ ಮುನ್ನ ನೌಕರರಿಗೆ ಸಂಬಳ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>