ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಾರಿಗೆ ಸಂಸ್ಥೆಗಳಲ್ಲಿ ನೌಕರರಿಗೆ ಸಂಬಳ ಕೊಡುವಷ್ಟು ವರಮಾನ ಇನ್ನೂ ಸಂಗ್ರಹವಾಗುತ್ತಿಲ್ಲ. ವೇತನಕ್ಕೆ ಅನುದಾನ ಕೋರಿರುವ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲೇ ಬಾಕಿ ಇದ್ದು, ನವರಾತ್ರಿ ಹಬ್ಬವನ್ನು ನೌಕರರು ಬರಿಗೈನಲ್ಲೇ ಬರಮಾಡಿಕೊಳ್ಳಬೇಕಾದ ಸ್ಥಿತಿ ಇದೆ.