<p><strong>ಬೆಂಗಳೂರು:‘</strong>ಆದಾಯ ಮೀರಿದ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ನಡೆಸಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿ ಕ್ರಿಮಿನಲ್ ಪ್ರಕರಣದ ಆರೋಪ ಎದುರಿಸುತ್ತಿರುವ ವಸತಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಕುರಿತಂತೆ ಸೋಮಣ್ಣ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.</p>.<p>ವಿಚಾರಣಾ ಕೋರ್ಟ್ಗೆ ಹಾಜರಾತಿಯಿಂದ ವಿನಾಯಿತಿ ಕೋರಿದ್ದ ಅರ್ಜಿದಾರರ ಮನವಿಗೆ ನ್ಯಾಯಪೀಠ, ‘ಅರ್ಜಿದಾರರ ಮನವಿಯನ್ನು ಸಕಾರಣಗಳ ಆಧಾರದಲ್ಲಿ ಪರಿಗಣಿಸಿ’ ಎಂದು ಜನಪ್ರತಿನಿಧಿಗಳ ಕೋರ್ಟ್ಗೆ ಸೂಚಿಸಿದೆ. ಬೇಸಿಗೆ ರಜೆ ನಂತರಕ್ಕೆ ವಿಚಾರಣೆ ಮುಂದೂಡಲಾಗಿದೆ.</p>.<p class="Subhead">ಅರ್ಜಿ ವಜಾ: ‘ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನನಗೆ ಸಮನ್ಸ್ ಜಾರಿ ಮಾಡಿರುವ ಕಾರಣ ಪೊಲೀಸರಿಂದ ಬಂಧನದ ಭೀತಿ ಇದೆ‘ ಎಂದು ಸೋಮಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು,‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದನ್ಯಾಯಾಧೀಶ ಬಿ. ಜಯಂತ್ ಕುಮಾರ್ (ಸಿಸಿಎಚ್–91) ಶುಕ್ರವಾರ ನಿರಾಕರಿಸಿದ್ದಾರೆ.</p>.<p>‘ಬಂಧನದ ಭೀತಿ ಇದ್ದರೆ ಮಾತ್ರವೇ ನಿರೀಕ್ಷಣಾ ಜಾಮೀನು ಕೋರಬಹುದು. ಈ ಪ್ರಕರಣದಲ್ಲಿ ಬಂಧನದ ಭೀತಿ ಪ್ರಮೇಯ ಉದ್ಭವಿಸದು. ಆದ್ದರಿಂದ, ಅರ್ಜಿ ಮಾನ್ಯ ಮಾಡಲಾಗದು‘ ಎಂದು ನ್ಯಾಯಾಧೀಶ ಜಯಂತ್ ಅರ್ಜಿ ವಜಾ ಮಾಡಿದ್ದಾರೆ.</p>.<p>ಮೂಡಲಪಾಳ್ಯದ ರಾಮಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಆಧಾರದಲ್ಲಿ ನ್ಯಾಯಾಧೀಶ ಜಯಂತ್ ಅವರು ಸೋಮಣ್ಣ ಅವರಿಗೆ ಖುದ್ದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ್ದಾರೆ.ಇದೇ 16ರಂದು ಸೋಮಣ್ಣ ಕೋರ್ಟ್ಗೆ ಖುದ್ದು ಹಾಜರಾಗಬೇಕಿದೆ.</p>.<p>ದೂರು: ‘ಸೋಮಣ್ಣ, ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. , ಇವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ- 1988ರ ಕಲಂ 13(1)(ಬಿ) (ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಲು ಆದೇಶಿಸಬೇಕು’ ಎಂಬುದು ದೂರು ದಾರರ ಕೋರಿಕೆ. ದೂರುದಾರರ ಪರಹೈಕೋರ್ಟ್ ವಕೀಲ ಬ್ಯಾತ ಎನ್.ಜಗದೀಶ್ ವಾದ ಮಂಡಿ ಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:‘</strong>ಆದಾಯ ಮೀರಿದ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ನಡೆಸಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿ ಕ್ರಿಮಿನಲ್ ಪ್ರಕರಣದ ಆರೋಪ ಎದುರಿಸುತ್ತಿರುವ ವಸತಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಕುರಿತಂತೆ ಸೋಮಣ್ಣ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.</p>.<p>ವಿಚಾರಣಾ ಕೋರ್ಟ್ಗೆ ಹಾಜರಾತಿಯಿಂದ ವಿನಾಯಿತಿ ಕೋರಿದ್ದ ಅರ್ಜಿದಾರರ ಮನವಿಗೆ ನ್ಯಾಯಪೀಠ, ‘ಅರ್ಜಿದಾರರ ಮನವಿಯನ್ನು ಸಕಾರಣಗಳ ಆಧಾರದಲ್ಲಿ ಪರಿಗಣಿಸಿ’ ಎಂದು ಜನಪ್ರತಿನಿಧಿಗಳ ಕೋರ್ಟ್ಗೆ ಸೂಚಿಸಿದೆ. ಬೇಸಿಗೆ ರಜೆ ನಂತರಕ್ಕೆ ವಿಚಾರಣೆ ಮುಂದೂಡಲಾಗಿದೆ.</p>.<p class="Subhead">ಅರ್ಜಿ ವಜಾ: ‘ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನನಗೆ ಸಮನ್ಸ್ ಜಾರಿ ಮಾಡಿರುವ ಕಾರಣ ಪೊಲೀಸರಿಂದ ಬಂಧನದ ಭೀತಿ ಇದೆ‘ ಎಂದು ಸೋಮಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು,‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದನ್ಯಾಯಾಧೀಶ ಬಿ. ಜಯಂತ್ ಕುಮಾರ್ (ಸಿಸಿಎಚ್–91) ಶುಕ್ರವಾರ ನಿರಾಕರಿಸಿದ್ದಾರೆ.</p>.<p>‘ಬಂಧನದ ಭೀತಿ ಇದ್ದರೆ ಮಾತ್ರವೇ ನಿರೀಕ್ಷಣಾ ಜಾಮೀನು ಕೋರಬಹುದು. ಈ ಪ್ರಕರಣದಲ್ಲಿ ಬಂಧನದ ಭೀತಿ ಪ್ರಮೇಯ ಉದ್ಭವಿಸದು. ಆದ್ದರಿಂದ, ಅರ್ಜಿ ಮಾನ್ಯ ಮಾಡಲಾಗದು‘ ಎಂದು ನ್ಯಾಯಾಧೀಶ ಜಯಂತ್ ಅರ್ಜಿ ವಜಾ ಮಾಡಿದ್ದಾರೆ.</p>.<p>ಮೂಡಲಪಾಳ್ಯದ ರಾಮಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಆಧಾರದಲ್ಲಿ ನ್ಯಾಯಾಧೀಶ ಜಯಂತ್ ಅವರು ಸೋಮಣ್ಣ ಅವರಿಗೆ ಖುದ್ದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ್ದಾರೆ.ಇದೇ 16ರಂದು ಸೋಮಣ್ಣ ಕೋರ್ಟ್ಗೆ ಖುದ್ದು ಹಾಜರಾಗಬೇಕಿದೆ.</p>.<p>ದೂರು: ‘ಸೋಮಣ್ಣ, ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. , ಇವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ- 1988ರ ಕಲಂ 13(1)(ಬಿ) (ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಲು ಆದೇಶಿಸಬೇಕು’ ಎಂಬುದು ದೂರು ದಾರರ ಕೋರಿಕೆ. ದೂರುದಾರರ ಪರಹೈಕೋರ್ಟ್ ವಕೀಲ ಬ್ಯಾತ ಎನ್.ಜಗದೀಶ್ ವಾದ ಮಂಡಿ ಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>