ಬೆಂಗಳೂರು– ಮೈಸೂರು ದಶಪಥ ಹೆದ್ದಾರಿ ನರೇಂದ್ರ ಮೋದಿಯವರ ಕೊಡುಗೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಯೋಜನೆ ಬಗ್ಗೆ ಕನಸು ಕಂಡಿದ್ದರು. ಆದರೆ, ನನಸಾಗಿರಲಿಲ್ಲ. ಶಂಕುಸ್ಥಾಪನೆಗೆ ಹಾಕಿದ್ದ ಕಲ್ಲುಗಳೇ ಮಾಯವಾಗುವ ಕಾಲವಿತ್ತು. ಆದರೆ, 2018ರಲ್ಲಿ ಶಿಲಾನ್ಯಾಸ ನೆರವೇರಿಸಿದ್ದ ಯೋಜನೆ ಈಗ ಮುಕ್ತಾಯವಾಗಿದೆ ಎಂದು ಹೇಳಿದರು.