‘ವಯನಾಡ್ ಜಿಲ್ಲೆಯ ಪೂಕೊಡೆ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ವೈರಾಣು ದೃಢಪಟ್ಟಿದೆ. ಹೀಗಾಗಿ, ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ಈ ಬಗ್ಗೆ ಎಚ್ಚರವಹಿಸಬೇಕು.ಸಾಮಾನ್ಯವಾಗಿ ಕಲುಷಿತ ನೀರು ಹಾಗೂ ಆಹಾರದಿಂದ ಈ ವೈರಾಣು ಹರಡುತ್ತದೆ.ವಾಂತಿ, ಅತಿಸಾರ ಮತ್ತು ಹೊಟ್ಟೆನೋವು ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣ ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮಾರಣಾಂತಿಕವಾಗಲಿದೆ. ರೋಗ ಲಕ್ಷಣಗಳನ್ನು ಆಧರಿಸಿ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಇಲಾಖೆಯ ಸಹ ನಿರ್ದೇಶಕರು ತಿಳಿಸಿದ್ದಾರೆ.