ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ ‘ಬೆಳಗಾವಿಯಿಂದ ಬಸ್ ಮೂಲಕ ಆರೇಳು ತಾಸಿನಲ್ಲಿ ಬೆಂಗಳೂರಿಗೆ ಹೋಗಬಹುದು. ಆದರೆ, ರೈಲಿನಲ್ಲಿ ಕನಿಷ್ಠ ಎಂಟು ಗಂಟೆಯಾದರೂ ಬೇಕಾಗುತ್ತದೆ. ಆದ್ದರಿಂದ ಈ ಮಾರ್ಗದಲ್ಲಿ ಎಲೆಕ್ಟ್ರಾನಿಕ್ ಚಾಲಿತ ರೈಲು ಓಡಿಸಬೇಕು, ಜೋಡಿ ಮಾರ್ಗದ ಕಾರ್ಯ ಪೂರ್ಣಗೊಳಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.