<p><strong>ಹುಬ್ಬಳ್ಳಿ</strong>: ಇಲ್ಲಿಂದ ಗದುಗಿಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗಿರುವ ಉತ್ತರ ಕರ್ನಾಟಕದ ಮೊದಲ ಪಾರಂಪರಿಕ ರೈಲ್ವೆ ವಸ್ತು ಸಂಗ್ರಹಾಲಯವನ್ನು ಭಾನುವಾರ ನವದೆಹಲಿಯಿಂದ ರೈಲ್ವೆ ಸಚಿವ ಪಿಯೂಷ್ ಗೋಯಲ್ ಆನ್ಲೈನ್ ಮೂಲಕ ಲೋಕಾರ್ಪಣೆ ಮಾಡಿದರು.</p>.<p>ಬಳಿಕ ಮಾತನಾಡಿದ ಅವರು ’ದೇಶದಾದ್ಯಂತ ಎಲೆಕ್ಟ್ರಾನಿಕ್ ಚಾಲಿತ ಮತ್ತು ಪರಿಸರ ಸ್ನೇಹಿ ರೈಲುಗಳನ್ನು ಓಡಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ದೇಶವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಕೊಂಡೊಯ್ಯಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯ. ಇದಕ್ಕೆ ಪೂರಕವಾಗಿ ನಾವೆಲ್ಲರೂ ದುಡಿಯೋಣ’ ಎಂದು ಕರೆ ನೀಡಿದರು.</p>.<p>‘ರೈಲು ಕೇವಲ ವಾಣಿಜ್ಯ ವಹಿವಾಟು ಮತ್ತು ಲಾಭದ ಉದ್ದೇಶ ಹೊಂದಿಲ್ಲ. ಇದು ಮನುಷ್ಯನ ಬದುಕಿನ ಜೊತೆ ಭಾವನಾತ್ಮಕ ಬೆಸುಗೆ ಹೊಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅರಸಾಳುವಿನಲ್ಲಿ ನವೀಕರಣಗೊಂಡ ‘ಮ್ಯೂಸಿಯಂ ಮಾಲ್ಗುಡಿ’ ಶಂಕರನಾಗ್ ಅವರನ್ನು ನೆನಪಿಸುತ್ತದೆ’ ಎಂದರು.</p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ ‘ಬೆಳಗಾವಿಯಿಂದ ಬಸ್ ಮೂಲಕ ಆರೇಳು ತಾಸಿನಲ್ಲಿ ಬೆಂಗಳೂರಿಗೆ ಹೋಗಬಹುದು. ಆದರೆ, ರೈಲಿನಲ್ಲಿ ಕನಿಷ್ಠ ಎಂಟು ಗಂಟೆಯಾದರೂ ಬೇಕಾಗುತ್ತದೆ. ಆದ್ದರಿಂದ ಈ ಮಾರ್ಗದಲ್ಲಿ ಎಲೆಕ್ಟ್ರಾನಿಕ್ ಚಾಲಿತ ರೈಲು ಓಡಿಸಬೇಕು, ಜೋಡಿ ಮಾರ್ಗದ ಕಾರ್ಯ ಪೂರ್ಣಗೊಳಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿಂದ ಗದುಗಿಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗಿರುವ ಉತ್ತರ ಕರ್ನಾಟಕದ ಮೊದಲ ಪಾರಂಪರಿಕ ರೈಲ್ವೆ ವಸ್ತು ಸಂಗ್ರಹಾಲಯವನ್ನು ಭಾನುವಾರ ನವದೆಹಲಿಯಿಂದ ರೈಲ್ವೆ ಸಚಿವ ಪಿಯೂಷ್ ಗೋಯಲ್ ಆನ್ಲೈನ್ ಮೂಲಕ ಲೋಕಾರ್ಪಣೆ ಮಾಡಿದರು.</p>.<p>ಬಳಿಕ ಮಾತನಾಡಿದ ಅವರು ’ದೇಶದಾದ್ಯಂತ ಎಲೆಕ್ಟ್ರಾನಿಕ್ ಚಾಲಿತ ಮತ್ತು ಪರಿಸರ ಸ್ನೇಹಿ ರೈಲುಗಳನ್ನು ಓಡಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ದೇಶವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಕೊಂಡೊಯ್ಯಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯ. ಇದಕ್ಕೆ ಪೂರಕವಾಗಿ ನಾವೆಲ್ಲರೂ ದುಡಿಯೋಣ’ ಎಂದು ಕರೆ ನೀಡಿದರು.</p>.<p>‘ರೈಲು ಕೇವಲ ವಾಣಿಜ್ಯ ವಹಿವಾಟು ಮತ್ತು ಲಾಭದ ಉದ್ದೇಶ ಹೊಂದಿಲ್ಲ. ಇದು ಮನುಷ್ಯನ ಬದುಕಿನ ಜೊತೆ ಭಾವನಾತ್ಮಕ ಬೆಸುಗೆ ಹೊಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅರಸಾಳುವಿನಲ್ಲಿ ನವೀಕರಣಗೊಂಡ ‘ಮ್ಯೂಸಿಯಂ ಮಾಲ್ಗುಡಿ’ ಶಂಕರನಾಗ್ ಅವರನ್ನು ನೆನಪಿಸುತ್ತದೆ’ ಎಂದರು.</p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ ‘ಬೆಳಗಾವಿಯಿಂದ ಬಸ್ ಮೂಲಕ ಆರೇಳು ತಾಸಿನಲ್ಲಿ ಬೆಂಗಳೂರಿಗೆ ಹೋಗಬಹುದು. ಆದರೆ, ರೈಲಿನಲ್ಲಿ ಕನಿಷ್ಠ ಎಂಟು ಗಂಟೆಯಾದರೂ ಬೇಕಾಗುತ್ತದೆ. ಆದ್ದರಿಂದ ಈ ಮಾರ್ಗದಲ್ಲಿ ಎಲೆಕ್ಟ್ರಾನಿಕ್ ಚಾಲಿತ ರೈಲು ಓಡಿಸಬೇಕು, ಜೋಡಿ ಮಾರ್ಗದ ಕಾರ್ಯ ಪೂರ್ಣಗೊಳಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>