‘ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿ ಕೊಡುಗೆ ಏನು?’ ಎಂದು ಕೇಳಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಸಚಿವರು, ‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ಸೇ ಬೇರೆ. ಈಗಿನದ್ದೇ ಬೇರೆ. ಸ್ವಾತಂತ್ರ್ಯ ಸಿಗುತ್ತಿದ್ದಂತೆಯೇ ಕಾಂಗ್ರೆಸ್ ವಿಸರ್ಜಿಸುವಂತೆ ಮಹಾತ್ಮ ಗಾಂಧೀಜಿ ಕರೆ ನೀಡಿದ್ದರು. ಆದರೆ, ಕೆಲವರು ಸ್ವಾರ್ಥಕ್ಕೋಸ್ಕರ ರಾಜಕೀಯಕ್ಕೆ ಬಳಸಿಕೊಂಡರು, ಉಳಿಸಿಕೊಂಡರು’ ಎಂದು ದೂರಿದರು.