‘ಹಾಸನ ಕ್ಷೇತ್ರದ ಜೆಡಿಎಸ್ ಪಕ್ಷದ ಟಿಕೆಟ್ ವಿಷಯದಲ್ಲಿ ಇತ್ತೀಚಿನ ಬೆಳವಣಿಗೆಗಳಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಭವಾನಿ ರೇವಣ್ಣ ಅವರಿಗೆ ಸೂರಜ್, ಪ್ರಜ್ವಲ್ ಟಿಕೆಟ್ ಕೊಡಿಸಲು ಸಾಧ್ಯ ಇಲ್ಲ. ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಎಚ್.ಡಿ. ದೇವೇಗೌಡರು, ಎಚ್.ಡಿ. ಕುಮಾರಸ್ವಾಮಿ, ನಾನು, ಜಿಲ್ಲೆಯ ಶಾಸಕರು ಸೇರಿ ಹಾಸನ ಸೇರಿದಂತೆ ಏಳು ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡುತ್ತೇವೆ. ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸುವುದು ಕಾರ್ಯಕರ್ತರ ಕರ್ತವ್ಯ’ ಎಂದರು.