ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೆಡಗೇವಾರ್ ಕೋಟ್ಯಂತರ ಯುವಕರಿಗೆ ಪ್ರೇರಣೆಯಾಗಿದ್ದರು. ವೈಯಕ್ತಿಕ ಜೀವನಕ್ಕಿಂತ ಸಮಾಜದ ಅಭಿವೃದ್ಧಿಗೆ ಶ್ರಮಿಸಿದವರು. ಸ್ವಾತಂತ್ರ್ಯಕ್ಕಾಗಿ ಅವರು ಹೋರಾಟ ಮಾಡಿದರು. ಜೈಲಿಗೂ ಹೋಗಿದ್ದರು. ಅಂದಿನ ಜಾತಿ, ಅಸ್ಪೃಶ್ಯತೆಯಂತಹ ದೊಡ್ಡ ಸಮಸ್ಯೆಗಳಿಗೆ ಪರಿಹಾರ ಹುಡುಕಿದ್ದರು’ ಎಂದು ಅಭಿಪ್ರಾಯಪಟ್ಟರು.