ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ 14,71,458 ಬಟ್ಟೆ ಬ್ಯಾಗ್ಗಳನ್ನು ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸರಬರಾಜು ಮಾಡಲು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ನೀಡಿದ್ದ ಆದೇಶದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ. ₹13ಕ್ಕೆ ದೊರೆಯುವ ಬ್ಯಾಗ್ಗೆ ₹ 52 ನಿಗದಿ ಮಾಡಲಾಗಿತ್ತು. ಅಲ್ಲದೇ, ಸ್ಥಳೀಯ ಸಂಸ್ಥೆಗಳ ಅನುಮೋದನೆ ಪಡೆದಿರಲಿಲ್ಲ. ಪಾರಂಪರಿಕ ಕಟ್ಟಡದ ವ್ಯಾಪ್ತಿಗೆ ಒಳಪಡುವ ಮೈಸೂರು ಜಿಲ್ಲಾಧಿಕಾರಿ ವಸತಿಗೃಹದಲ್ಲಿ ಅನುಮತಿ ಪಡೆಯದೆ ₹ 50 ಲಕ್ಷ ವೆಚ್ಚದಲ್ಲಿ ಈಜುಕೊಳ, ಜಿಮ್ ನಿರ್ಮಿಸಲಾಗಿತ್ತು ಎಂಬುದೂ ಸೇರಿದಂತೆ ಕೆಲವು ನಿರ್ಧಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಸಾ.ರಾ.ಮಹೇಶ್, ಮೈಸೂರು ನಗರ ಪಾಲಿಕೆ ಮಾಜಿ ಉಪ ಮೇಯರ್ ಶೈಲೇಂದ್ರ ವಿ.ಭೀಮರಾವ್ ದೂರು ಸಲ್ಲಿಸಿದ್ದರು.