ಸಿ.ಟಿ.ರವಿ ಮಾತನಾಡಿ, ‘ಸಾವಿರಾರು ವರ್ಷಗಳಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಪೂಜೆ, ಪುನಸ್ಕಾರ ಮಾಡುವಾಗ ಶಂಖ ಊದುವುದು, ಗಂಟೆ ಬಾರಿಸುವುದು, ಜಾಗಟೆ ಬಾರಿಸುವುದು ನಡೆದುಕೊಂಡು ಬಂದಿರುವ ಸಂಪ್ರದಾಯ. ಸಾವಿರಾರು ವರ್ಷಗಳಿಂದಲೂ ಈ ಬಗ್ಗೆ ಯಾರೂ ಕೂಡ ತಕರಾರು ತೆಗೆದಿರಲಿಲ್ಲ. ಈಗ ಏಕಾಏಕಿ ಆಕ್ಷೇಪ ಇದೆ. ಇದರ ಹಿಂದೆ ಯಾವುದಾದರೂ ಪಿತೂರಿ ಇದೆಯೇ’ ಎಂದು ಪ್ರಶ್ನಿಸಿದರು.