‘ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ್ದ ಪ್ರಿಯಾಂಕ್, ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಲಂಚ–ಮಂಚದ ಸರ್ಕಾರ, ಸರ್ಕಾರಿ ನೌಕರಿ ಪಡೆಯಲು ಯುವಕರು ಲಂಚ ನೀಡಬೇಕು. ಯುವತಿಯರು ಮಂಚ ಹತ್ತಬೇಕು ಎಂದಿದ್ದರು. ಇದು ಉದ್ಯೋಗಸ್ಥ, ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನ. ಆದ್ದರಿಂದ ಮಹಿಳಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಎಎಪಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಆಗ್ರಹಿಸಿದರು.