ಆಧಾರ್ ಕಾರ್ಡ್ ಜೋಡಣೆ ಆಗದೇ ಇರುವ ರೈತರ ಸಂಖ್ಯೆ ಸಾಕಷ್ಟು ಇರುವುದನ್ನು ಗಮನಿಸಿದ ಅವರು, ‘ಬೆಳೆ ವಿಮೆಗೆ ಆಧಾರ್ ಕಾರ್ಡ್ ಜೋಡಣೆ ಆಗಿದೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ವಿಮಾ ಕಂಪನಿಗಳೊಂದಿಗೆ ಆಧಾರ್ನಲ್ಲಿ ಏನಾದರೂ ತಿದ್ದುಪಡಿ ಆಗಿದ್ದಲ್ಲಿ ಅದನ್ನು ನನ್ನ ಗಮನಕ್ಕೆ ತರಬೇಕು. ರೈತರೂ ಇದನ್ನು ಗಮನಿಸಬೇಕು’ ಎಂದೂ ಸಲಹೆ ನೀಡಿದರು.