ಎರಡನೇ ಹಂತದ ನಗರಗಳಿಗೆ ಆದ್ಯತೆ: ‘ಬ್ರ್ಯಾಂಡ್ ಬೆಂಗಳೂರು’ ಮಾದರಿಯಲ್ಲಿ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ ನಗರಗಳಲ್ಲೂ ತಂತ್ರಜ್ಞಾನ ಶೃಂಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಈ ನಗರಗಳಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್, ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಳ್ಳಲಿದ್ದಾರೆ ಎಂದರು.