<p><strong>ಬೆಂಗಳೂರು</strong>: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಿಯು, ಪದವಿ, ಸ್ನಾತಕೋತ್ತರ ಪದವಿ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿ ವೇತನ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಪ್ರತಿಭಾಶೋಧ (ಎನ್ಟಿಎಸ್) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.</p>.<p>ಎನ್ಸಿಇಆರ್ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈ ಪರೀಕ್ಷೆ ನಡೆಸಲಿದೆ. ನ.30ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನ. 2021ರ ಜ.24ಕ್ಕೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.</p>.<p>ಕಳೆದ ವರ್ಷ 1.23 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.</p>.<p><strong>ಯಾರು ಭಾಗವಹಿಸಬಹುದು?:</strong> ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಓದುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಅರ್ಜಿಯನ್ನು ಕೆಎಸ್ಇಇಬಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಶಾಲೆಗಳ ಮುಖ್ಯಶಿಕ್ಷಕರು kseeb.kar.nic.in ವೆಬ್ಸೈಟ್ ಮೂಲಕ ಲಾಗಿನ್ ಆಗಿ ತಮ್ಮ ವಿದ್ಯಾರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದು.</p>.<p><strong>ಪರೀಕ್ಷೆಯ ಸ್ವರೂಪ ಏನು?:</strong> ಬೌದ್ಧಿಕ ಸಾಮರ್ಥ್ಯ ಮತ್ತು ಅಭಿಕ್ಷಮತೆ ಎಂಬ ಎರಡು ಪತ್ರಿಕೆಗಳಿರುತ್ತವೆ. ಕನ್ನಡ, ಇಂಗ್ಲಿಷ್, ಉರ್ದು ಮತ್ತು ಮರಾಠಿ ಮಾಧ್ಯಮಗಳಲ್ಲಿ ಬರೆಯಬಹುದು.</p>.<p>ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.</p>.<p><strong>ಯಾರಿಗೆ, ಎಷ್ಟು?:</strong> ಪದವಿಪೂರ್ವ ಶಿಕ್ಷಣ ಪಡೆಯಲು ತಿಂಗಳಿಗೆ ₹1,200 ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ತಿಂಗಳಿಗೆ ₹2,000 ಹಾಗೂ ಉನ್ನತ ಶಿಕ್ಷಣದ ಹಂತದಲ್ಲಿ ಯುಜಿಸಿ ನಿಯಮಾನುಸಾರ ವಿದ್ಯಾರ್ಥಿವೇತನ ನೀಡಲಾಗುತ್ತದೆ.</p>.<p><strong>ವಿವರಗಳಿಗೆ</strong> 080-23341615.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಿಯು, ಪದವಿ, ಸ್ನಾತಕೋತ್ತರ ಪದವಿ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿ ವೇತನ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಪ್ರತಿಭಾಶೋಧ (ಎನ್ಟಿಎಸ್) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.</p>.<p>ಎನ್ಸಿಇಆರ್ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈ ಪರೀಕ್ಷೆ ನಡೆಸಲಿದೆ. ನ.30ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನ. 2021ರ ಜ.24ಕ್ಕೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.</p>.<p>ಕಳೆದ ವರ್ಷ 1.23 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.</p>.<p><strong>ಯಾರು ಭಾಗವಹಿಸಬಹುದು?:</strong> ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಓದುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಅರ್ಜಿಯನ್ನು ಕೆಎಸ್ಇಇಬಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಶಾಲೆಗಳ ಮುಖ್ಯಶಿಕ್ಷಕರು kseeb.kar.nic.in ವೆಬ್ಸೈಟ್ ಮೂಲಕ ಲಾಗಿನ್ ಆಗಿ ತಮ್ಮ ವಿದ್ಯಾರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದು.</p>.<p><strong>ಪರೀಕ್ಷೆಯ ಸ್ವರೂಪ ಏನು?:</strong> ಬೌದ್ಧಿಕ ಸಾಮರ್ಥ್ಯ ಮತ್ತು ಅಭಿಕ್ಷಮತೆ ಎಂಬ ಎರಡು ಪತ್ರಿಕೆಗಳಿರುತ್ತವೆ. ಕನ್ನಡ, ಇಂಗ್ಲಿಷ್, ಉರ್ದು ಮತ್ತು ಮರಾಠಿ ಮಾಧ್ಯಮಗಳಲ್ಲಿ ಬರೆಯಬಹುದು.</p>.<p>ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.</p>.<p><strong>ಯಾರಿಗೆ, ಎಷ್ಟು?:</strong> ಪದವಿಪೂರ್ವ ಶಿಕ್ಷಣ ಪಡೆಯಲು ತಿಂಗಳಿಗೆ ₹1,200 ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ತಿಂಗಳಿಗೆ ₹2,000 ಹಾಗೂ ಉನ್ನತ ಶಿಕ್ಷಣದ ಹಂತದಲ್ಲಿ ಯುಜಿಸಿ ನಿಯಮಾನುಸಾರ ವಿದ್ಯಾರ್ಥಿವೇತನ ನೀಡಲಾಗುತ್ತದೆ.</p>.<p><strong>ವಿವರಗಳಿಗೆ</strong> 080-23341615.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>