‘ಯುವಕರು ನಮ್ಮ ದೇಶದ ಆಸ್ತಿ. ಸಂಚಾರ ನಿಯಮ ಪಾಲನೆಯ ವಿಚಾರದಲ್ಲಿ ಅವರು ಉದ್ಧಟತನ ತೋರುತ್ತಿದ್ದಾರೆ. ಆ ಮೂಲಕ ಅಮೂಲ್ಯವಾದ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ನಾವು ಹೇಳುತ್ತಲೇ ಇದ್ದೇವೆ. ಈ ಕುರಿತು ಜಾಗೃತಿಯನ್ನೂ ಮೂಡಿಸುತ್ತಿದ್ದೇವೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕೆಲವರು ಕಳಪೆ ಗುಣಮಟ್ಟದ ಹೆಲ್ಮೆಟ್ಗಳನ್ನು ಧರಿಸುತ್ತಾರೆ. ಹೀಗಾಗಿ ಅಪಘಾತದ ವೇಳೆ ಹೆಚ್ಚಿನವರಿಗೆ ತಲೆಗೆ ಬಲವಾದ ಪೆಟ್ಟು ಬೀಳುತ್ತದೆ. ಅಂತಹವರು ತೀವ್ರ ರಕ್ತಸ್ರಾವದಿಂದ ಅಸು ನೀಗುತ್ತಾರೆ’ ಎಂದರು.