ಕೇಂದ್ರ–ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಹಿಂದುಳಿದ ವರ್ಗಗಳ ಚಟುವಟಿಕೆಗಳು– ಅಭಿವೃದ್ಧಿಗೆ ವಿಶೇಷಾದ್ಯತೆ ಕೊಟ್ಟಿವೆ. ಹಿಂದುಳಿದ ವರ್ಗಗಳ ಜಾತಿಗಳ ಆಯೋಗಕ್ಕೆ ಪ್ರಧಾನಿ ಮೋದಿ ಸರ್ಕಾರ ಸಾಂವಿಧಾನಿಕ ಮಾನ್ಯತೆ ಕೊಟ್ಟಿದೆ. ರಾಜ್ಯದಲ್ಲಿ ಹಿಂದುಳಿ ವರ್ಗಗಳ ಅಭಿವೃದ್ಧಿಗೆ ₹ 250 ಕೋಟಿ ನೀಡಿದ್ದು, ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, ಅವರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ. ಹಾಸ್ಟೆಲ್ಗಳ ನಿರ್ಮಾಣ, ಶೈಕ್ಷಣಿಕ ಚಟುವಟಿಕೆಗೆ ಉತ್ತೇಜನ, ಗಂಗಾ ಕಲ್ಯಾಣ ಯೋಜನೆ ವಿಸ್ತರಣೆ ಮೂಲಕ ಈ ಸಮುದಾಯಗಳ ಕಲ್ಯಾಣಕ್ಕೆ ಶ್ರಮಿಸಲಾಗುತ್ತಿದೆ ಎಂದು ಸುನಿಲ್ ಹೇಳಿದರು.