ಈಗಾಗಲೇ ತಜ್ಞರ ಆಯೋಗದ ಶಿಫಾರಸ್ಸಿನ ಮೇರೆಗೆ ಕೆಲ ನಿರ್ದಿಷ್ಟ ಜನ ಸಮುದಾಯಗಳಿಗೆ ನೀಡಲಾದ ಹಿಂದುಳಿದ ವರ್ಗ ಸ್ಥಾನಮಾನ ಪ್ರಕ್ರಿಯೆಯನ್ನು ಇನ್ನಷ್ಟು ಅರ್ಥ ಮಾಡಿಕೊಳ್ಳಲು ಹಾವನೂರು, ಚಿನ್ನಪ್ಪರೆಡ್ಡಿ ಹಾಗೂ ಇನ್ನೂ ಕೆಲ ಆಯೋಗದ ವರದಿಗಳನ್ನು ಪರಾಮರ್ಶೆ ಮಾಡುವ ಅಗತ್ಯವಿದೆ. ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದ್ದು, ಅದರ ಆಧಾರದಲ್ಲಿ ಈಗಿನ ಜನಸಂಖ್ಯೆಯ ಸಾಮಾಜಿಕ ಸ್ಥಿತಿಗತಿ ಆಧರಿಸಿ, ಮೀಸ ಲಾತಿ ಇನ್ನಿತರ ಸಂವಿಧಾನಾತ್ಮಕ ಅನುಕೂಲಗಳನ್ನು ನೀಡುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಹೆಚ್ಚು ಅರ್ಥ ಪೂರ್ಣ ಎಂದು ಅವರು ಹೇಳಿದ್ದಾರೆ.