ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರ ಪ್ರಕರಣ: ನ್ಯಾಯಾಂಗ ತನಿಖೆಗೆ ಒಡನಾಡಿ ಸಂಸ್ಥೆ ಆಗ್ರಹ

Last Updated 27 ಆಗಸ್ಟ್ 2022, 8:27 IST
ಅಕ್ಷರ ಗಾತ್ರ

ಮೈಸೂರು: ಪ್ರಭಾವಿ ಮಠದಿಂದ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣವನ್ನು ಸ್ವತಂತ್ರ ‌ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಇಲ್ಲಿನ ಒಡನಾಡಿ ಸಂಸ್ಥೆ ಒತ್ತಾಯಿಸಿದೆ.

ಈ ಬಗ್ಗೆ 'ಪ್ರಜಾವಾಣಿ' ಜೊತೆ ಮಾತನಾಡಿದ‌ ಸಂಸ್ಥೆಯ ಸಂಚಾಲಕರಾದ ಸ್ಟ್ಯಾನ್ಲಿ ಮತ್ತು ಪರಶು, ‘ಸ್ವಾಮೀಜಿ ವಿರುದ್ಧ ಈಗಾಗಲೇ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಕಾರಣದಿಂದ ನ್ಯಾಯಾಂಗ ತನಿಖೆಗೆ ಒಳಪಡಬೇಕು. ನಾಯಿ ಸತ್ತಾಗ ಕಣ್ಣೀರಿಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಣ್ಮಕ್ಕಳ ಕಣ್ಣೀರಿಗೆ ಧ್ವನಿಯಾಗಿ, ನ್ಯಾಯ ಕೊಡಿಸಬೇಕು’ ಎಂದು ಒತ್ತಾಯಿಸಿದರು.

ಬೆದರಿಕೆ ಕರೆ: ಸಂತ್ರಸ್ತ ಬಾಲಕಿಯರು ಒಡನಾಡಿಯ ಸಂಪರ್ಕಕ್ಕೆ ಬರುತ್ತಿದ್ದಂತೆಯೇ, ಸಂಸ್ಥೆಯ ಸಿಬ್ಬಂದಿಯ ಮೇಲೆ ನಿರಂತರ ಒತ್ತಡ, ಬೆದರಿಕೆ‌ ಕರೆಗಳು ಬಂದಿವೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT