ಈ ಬಗ್ಗೆ 'ಪ್ರಜಾವಾಣಿ' ಜೊತೆ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ಸ್ಟ್ಯಾನ್ಲಿ ಮತ್ತು ಪರಶು, ‘ಸ್ವಾಮೀಜಿ ವಿರುದ್ಧ ಈಗಾಗಲೇ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಕಾರಣದಿಂದ ನ್ಯಾಯಾಂಗ ತನಿಖೆಗೆ ಒಳಪಡಬೇಕು. ನಾಯಿ ಸತ್ತಾಗ ಕಣ್ಣೀರಿಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಣ್ಮಕ್ಕಳ ಕಣ್ಣೀರಿಗೆ ಧ್ವನಿಯಾಗಿ, ನ್ಯಾಯ ಕೊಡಿಸಬೇಕು’ ಎಂದು ಒತ್ತಾಯಿಸಿದರು.