ಪ್ರವಾಸಿಗರು ತಾಲ್ಲೂಕಿನ ಕಮಲಾಪುರದ ಪುರಾತತ್ವ ಇಲಾಖೆಯ ವಸ್ತು ಸಂಗ್ರಹಾಲಯ, ವಿಜಯ ವಿಠಲ ದೇವಸ್ಥಾನ ಹಾಗೂ ಕಮಲ ಮಹಲ್ ಸ್ಮಾರಕದ ಕೌಂಟರ್ನಲ್ಲಿ ಟಿಕೆಟ್ ಖರೀದಿಸಬಹುದಾಗಿದೆ. ಅಲ್ಲದೇ ಪ್ರತಿ ದಿನ ಟಿಕೆಟ್ ಖರೀದಿ ಮೇಲೆ ಹೇರಿದ್ದ ಮಿತಿ ಕೂಡ ತೆಗೆದು ಹಾಕಲಾಗಿದೆ. ಈ ವಿಷಯವನ್ನು ಎಎಸ್ಐ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ. ಕಾಳಿಮುತ್ತು ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ. ಈ ಹಿಂದೆ ದಿನಕ್ಕೆ 2,000 ಜನರಿಗಷ್ಟೇ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಲಾಗಿತ್ತು.