‘ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವುದು, ನಿಗಮ–ಮಂಡಲಿಗೆ ನೇಮಕ ಮಾಡುವುದನ್ನು ಪಕ್ಷ, ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ. ಮಂಡ್ಯ ಜಿಲ್ಲೆಯ ರೈತರ ಬಗ್ಗೆ ಯಡಿಯೂರಪ್ಪ ಹೆಚ್ಚಿನ ಒಲವು ಹೊಂದಿದ್ದಾರೆ. ಆದಷ್ಟು ಬೇಗ ಮೈಶುಗರ್ಸ್ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಚಿಂತನೆಯಲ್ಲಿದ್ದಾರೆ. ಶೀಘ್ರದಲ್ಲೇ ಪಿಎಸ್ಎಸ್ಕೆ ಮಾದರಿಯಲ್ಲೇ ಮೈಶುಗರ್ಸ್ ಪುನರಾರಂಭವಾಗಲಿದೆ. ಇದೇ ರೀತಿ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಯೂ ಕೂಡ ಪುನರ್ ಆರಂಭವಾಗಲಿದೆ’ ಎಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.