ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳಲು ಫಲಾನುಭವಿಗಳು ಅಧಿಕಾರಿಗಳಿಗೆ ಕೈ ಬಿಸಿ ಮಾಡಬೇಕಾದ ದುಃಸ್ಥಿತಿ ಇದೆ. ಇಲ್ಲದಿದ್ದರೆ ಅನಗತ್ಯ ದಾಖಲೆಗಳನ್ನು ಕೇಳುವ ಮೂಲಕ ಗ್ರಾಮೀಣ ಭಾಗದ ಮುಗ್ದ ಫಲಾನುಭವಿಗಳನ್ನು ಸತಾಯಿಸಲಾಗುತ್ತದೆ. ಅರ್ಹರಿಗೆ ನೇರವಾಗಿ ತಲುಪಿಸಲು ಸರ್ಕಾರ ವಿವಿಧ ಉಪಕ್ರಮಗಳನ್ನು ಜಾರಿಗೊಳಿಸಿದರೂ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಧಿಕಾರಿಶಾಹಿ ಮನೋಭಾವ ಬದಲಾವಣೆಯಾಗಬೇಕು. ಆಗ ಮಾತ್ರ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ.