<p><strong>ಬೆಂಗಳೂರು</strong>: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧಿಕೃತ ಕಚೇರಿಯ ಪೂಜೆ ವಿಕಾಸಸೌಧದಲ್ಲಿ ಶುಕ್ರವಾರ ನಡೆದಿದ್ದು, ಕೋವಿಡ್ ನಿಯಂತ್ರಣ ಮಾರ್ಗಸೂಚಿ ಲೆಕ್ಕಿಸದೇ ನೂರಾರು ಮಂದಿ ಪಾಲ್ಗೊಂಡಿದ್ದರು.</p>.<p>ಹೆಚ್ಚಿನವರು ದೈಹಿಕ ಅಂತರ, ಮಾಸ್ಕ್ ಧರಿಸುವುದನ್ನೇ ಮರೆತಿದ್ದರು. ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿಗಳು, ಸಿಬ್ಬಂದಿಯೂ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<p>ನಾಗರ ಪಂಚಮಿ ಹಬ್ಬದ ದಿನವಾದ ಶುಕ್ರವಾರ ಸಚಿವರ ಪೈಕಿ ಹಲವರು ತಮ್ಮ ಅಧಿಕೃತ ಕಚೇರಿಗಳ ಪೂಜೆ ನೆರವೇರಿಸಿದರು. ಆ ಪೈಕಿ ಗೃಹ ಸಚಿವರ ಕಚೇರಿ ಪೂಜೆಯ ಕಾರ್ಯಕ್ರಮದಲ್ಲಿ ಜನರು ಕಿಕ್ಕಿರಿದು ಸೇರಿದ್ದರು.</p>.<p>ಆರಗ ಜ್ಞಾನೇಂದ್ರ ಅವರು ಪ್ರತಿನಿಧಿಸುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಜನರು ಕಚೇರಿಗೆ ಬಂದು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಅವರ ಅಭಿಮಾನಿಗಳು, ಬೆಂಬಲಿಗರೂ ಕಾರ್ಯಕ್ರಮದಲ್ಲಿದ್ದರು.</p>.<p>ಗೃಹ ಸಚಿವರ ಬೆಂಬಲಿಗರು ಮತ್ತು ಅಭಿಮಾನಿಗಳು ಅಂತರ ಕಾಯ್ದುಕೊಳ್ಳದೇ ಸಚಿವರೊಂದಿಗೆ ಫೋಟೊ ಸೆರೆಹಿಡಿಯುತ್ತಿದ್ದ ದೃಶ್ಯ ಕಂಡುಬಂತು. ಹಲವರು ಮಾಸ್ಕ್ ಧರಿಸದೇ ಗುಂಪುಗೂಡಿ ಫೋಟೊ ತೆಗೆದುಕೊಳ್ಳುವುದರಲ್ಲಿ ಮಗ್ನರಾಗಿದ್ದರು.</p>.<p>ಆಹ್ವಾನ ನೀಡಿರಲಿಲ್ಲ: ಕಚೇರಿ ಪೂಜೆ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ಕಚೇರಿ ಪೂಜೆಯಲ್ಲಿ ಭಾಗವಹಿಸುವಂತೆ ನಾನು ಯಾರಿಗೂ ಆಹ್ವಾನ ನೀಡಿರಲಿಲ್ಲ’ ಎಂದರು.</p>.<p>‘ಪೂಜೆ ನೆರವೇರಿಸಿ ಕಚೇರಿ ಪ್ರವೇಶಿಸಿದ್ದೇನೆ. ಗೃಹ ಇಲಾಖೆ ಮಲಗದಂತೆ ನೋಡಿಕೊಳ್ಳುತ್ತೇನೆ. ಪೊಲೀಸ್ ಇಲಾಖೆ ಎಚ್ಚರವಾಗಿದ್ದು, ಜನರು ನೆಮ್ಮದಿಯಿಂದ ನಿದ್ರಿಸುವ ವಾತಾವರಣ ರಾಜ್ಯದಲ್ಲಿರುವಂತೆ ಕೆಲಸ ಮಾಡುತ್ತೇನೆ’ ಎಂದರು.</p>.<p>‘ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ತನಿಖೆ ಬಹು ಆಯಾಮಗಳಲ್ಲಿ ನಡೆಯುತ್ತಿದೆ. ಎರಡರಿಂದ ಮೂರು ದಿನಗಳಲ್ಲಿ ಸ್ಪಷ್ಟ ಮಾಹಿತಿ ಲಭ್ಯವಾಗಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧಿಕೃತ ಕಚೇರಿಯ ಪೂಜೆ ವಿಕಾಸಸೌಧದಲ್ಲಿ ಶುಕ್ರವಾರ ನಡೆದಿದ್ದು, ಕೋವಿಡ್ ನಿಯಂತ್ರಣ ಮಾರ್ಗಸೂಚಿ ಲೆಕ್ಕಿಸದೇ ನೂರಾರು ಮಂದಿ ಪಾಲ್ಗೊಂಡಿದ್ದರು.</p>.<p>ಹೆಚ್ಚಿನವರು ದೈಹಿಕ ಅಂತರ, ಮಾಸ್ಕ್ ಧರಿಸುವುದನ್ನೇ ಮರೆತಿದ್ದರು. ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿಗಳು, ಸಿಬ್ಬಂದಿಯೂ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<p>ನಾಗರ ಪಂಚಮಿ ಹಬ್ಬದ ದಿನವಾದ ಶುಕ್ರವಾರ ಸಚಿವರ ಪೈಕಿ ಹಲವರು ತಮ್ಮ ಅಧಿಕೃತ ಕಚೇರಿಗಳ ಪೂಜೆ ನೆರವೇರಿಸಿದರು. ಆ ಪೈಕಿ ಗೃಹ ಸಚಿವರ ಕಚೇರಿ ಪೂಜೆಯ ಕಾರ್ಯಕ್ರಮದಲ್ಲಿ ಜನರು ಕಿಕ್ಕಿರಿದು ಸೇರಿದ್ದರು.</p>.<p>ಆರಗ ಜ್ಞಾನೇಂದ್ರ ಅವರು ಪ್ರತಿನಿಧಿಸುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಜನರು ಕಚೇರಿಗೆ ಬಂದು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಅವರ ಅಭಿಮಾನಿಗಳು, ಬೆಂಬಲಿಗರೂ ಕಾರ್ಯಕ್ರಮದಲ್ಲಿದ್ದರು.</p>.<p>ಗೃಹ ಸಚಿವರ ಬೆಂಬಲಿಗರು ಮತ್ತು ಅಭಿಮಾನಿಗಳು ಅಂತರ ಕಾಯ್ದುಕೊಳ್ಳದೇ ಸಚಿವರೊಂದಿಗೆ ಫೋಟೊ ಸೆರೆಹಿಡಿಯುತ್ತಿದ್ದ ದೃಶ್ಯ ಕಂಡುಬಂತು. ಹಲವರು ಮಾಸ್ಕ್ ಧರಿಸದೇ ಗುಂಪುಗೂಡಿ ಫೋಟೊ ತೆಗೆದುಕೊಳ್ಳುವುದರಲ್ಲಿ ಮಗ್ನರಾಗಿದ್ದರು.</p>.<p>ಆಹ್ವಾನ ನೀಡಿರಲಿಲ್ಲ: ಕಚೇರಿ ಪೂಜೆ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ಕಚೇರಿ ಪೂಜೆಯಲ್ಲಿ ಭಾಗವಹಿಸುವಂತೆ ನಾನು ಯಾರಿಗೂ ಆಹ್ವಾನ ನೀಡಿರಲಿಲ್ಲ’ ಎಂದರು.</p>.<p>‘ಪೂಜೆ ನೆರವೇರಿಸಿ ಕಚೇರಿ ಪ್ರವೇಶಿಸಿದ್ದೇನೆ. ಗೃಹ ಇಲಾಖೆ ಮಲಗದಂತೆ ನೋಡಿಕೊಳ್ಳುತ್ತೇನೆ. ಪೊಲೀಸ್ ಇಲಾಖೆ ಎಚ್ಚರವಾಗಿದ್ದು, ಜನರು ನೆಮ್ಮದಿಯಿಂದ ನಿದ್ರಿಸುವ ವಾತಾವರಣ ರಾಜ್ಯದಲ್ಲಿರುವಂತೆ ಕೆಲಸ ಮಾಡುತ್ತೇನೆ’ ಎಂದರು.</p>.<p>‘ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ತನಿಖೆ ಬಹು ಆಯಾಮಗಳಲ್ಲಿ ನಡೆಯುತ್ತಿದೆ. ಎರಡರಿಂದ ಮೂರು ದಿನಗಳಲ್ಲಿ ಸ್ಪಷ್ಟ ಮಾಹಿತಿ ಲಭ್ಯವಾಗಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>