ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಜೊತೆಗೆ ಓಮೈಕ್ರಾನ್ ಪ್ರಕರಣಗಳೂ ಹೆಚ್ಚಳವಾಗಿವೆ. ಶುಕ್ರವಾರ ಒಂದೇ ದಿನ 23 ಮಂದಿಯಲ್ಲಿ ಕೊರೊನಾ ವೈರಾಣುವಿನ ರೂಪಾಂತರ ಓಮೈಕ್ರಾನ್ದೃಢಪಟ್ಟಿದೆ.ಸೋಂಕಿತರಲ್ಲಿ 19 ಮಂದಿ ವಿದೇಶದಿಂದ ಮರಳಿದವರಾಗಿದ್ದಾರೆ.
ಹೊಸ ಪ್ರಕರಣಗಳಲ್ಲಿ 21 ಬೆಂಗಳೂರಿನಲ್ಲಿ ದೃಢಪಟ್ಟರೇ, ಎರಡು ಪ್ರಕರಣಗಳು ಮಂಗಳೂರಿನಲ್ಲಿ ಪತ್ತೆಯಾಗಿವೆ. ಇದರಿಂದಾಗಿ, ಓಮೈಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ 66ಕ್ಕೆ ಏರಿಕೆಯಾಗಿದೆ.
Twenty three new cases of Omicron confirmed in Karnataka today, of which 19 are international travellers from USA, Europe, Middle East and Africa.#Omicron #COVID19 @BSBommai @mansukhmandviya
— Dr Sudhakar K (@mla_sudhakar) December 31, 2021
ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಶುಕ್ರವಾರ ಬೆಂಗಳೂರಿನಲ್ಲಿ 656 ಸೇರಿದಂತೆ ರಾಜ್ಯದಲ್ಲಿ832 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ.ಮೂರೂವರೆ ತಿಂಗಳಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.
ರಾಜ್ಯದ 22 ಜಿಲ್ಲೆಗಳಲ್ಲಿಕೋವಿಡ್ ಪ್ರಕರಣಗಳು ಹೊಸದಾಗಿಪತ್ತೆಯಾಗಿವೆ. ಒಂದು ದಿನದ ಅವಧಿಯಲ್ಲಿ 1.17 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.70 ರಷ್ಟು ದೃಢಪಟ್ಟಿದೆ. ಐದು ಜಿಲ್ಲೆಗಳಲ್ಲಿಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 16ಜಿಲ್ಲೆಗಳಲ್ಲಿಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್ ಸೇರಿದಂತೆ 8ಜಿಲ್ಲೆಗಳಲ್ಲಿಹೊಸದಾಗಿ ಪ್ರಕರಣಗಳು ವರದಿಯಾಗಿಲ್ಲ.
ಉಡುಪಿಯಲ್ಲಿ 35, ದಕ್ಷಿಣ ಕನ್ನಡದಲ್ಲಿ 30, ಕೊಡಗಿನಲ್ಲಿ 21, ಬೆಳಗಾವಿಯಲ್ಲಿ 12 ಹಾಗೂ ಹಾಸನದಲ್ಲಿ 11 ಪ್ರಕರಣಗಳು ವರದಿಯಾಗಿವೆ.ಉಳಿದಜಿಲ್ಲೆಗಳಲ್ಲಿಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.07 ಲಕ್ಷ ದಾಟಿದೆ.
ಸೋಂಕಿತರಲ್ಲಿ 335 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.60 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 8,712 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ 7,286 ಸಕ್ರಿಯ ಪ್ರಕರಣಗಳಿವೆ.ರಾಯಚೂರು ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಬೀದರ್, ಬಾಗಲಕೋಟೆ ಸೇರಿದಂತೆ ಆರು ಜಿಲ್ಲೆಗಳಲ್ಲಿಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.
ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಐವರು, ದಕ್ಷಿಣ ಕನ್ನಡ, ಮಂಡ್ಯ ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.96 ರಷ್ಟು ಇದೆ. ಈವರೆಗೆಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,335ಕ್ಕೆ ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.