ಬಳಿಕ ಸ್ಥಳಕ್ಕೆ ಬಂದ ಗೃಹರಕ್ಷಕ ದಳದ ಸಿಬ್ಬಂದಿ, ಮರಕ್ಕೆ ಹಗ್ಗ ಕಟ್ಟಿ, ರವಿ ಅವರನ್ನು ತಲುಪಿದರು. ಅದೇ ಹಗ್ಗವನ್ನು ಸಲೀಂ ಅವರಿಗೆ ಬಿಗಿದು ರಕ್ಷಿಸಿದ ರವಿ, ತಾವು ದಡ ತಲುಪಿದರು. ಬಳಿಕ ಗೃಹರಕ್ಷಕ ದಳದ ಘಟಕಾಧಿಕಾರಿ ದಿನೇಶ್, ಈಜುಗಾರರಾದ ಚೆನ್ನಪ್ಪ, ಜನಾರ್ದನ, ನಾರಾಯಣ ಅವರು ದೋಣಿ ಮೂಲಕ ಸಾಗಿ, ಸಲೀಂ ಅವರನ್ನು ಮೇಲಕ್ಕೆ ತಂದರು.