<p><strong>ಬೆಂಗಳೂರು: </strong>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ಶ್ರಮಜೀವಿ ವರ್ಗಕ್ಕೆ ಎರಡು ಆರ್ಥಿಕ ಪ್ಯಾಕೇಜ್ಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ, ಕುಟುಂಬವನ್ನು ಆರ್ಥಿಕವಾಗಿ ಸಲುಹುವ ವ್ಯಕ್ತಿ ಕೋವಿಡ್ನಿಂದ ಮೃತಪಟ್ಟಿದ್ದರೆ ಅಂತಹವರ ಅವಲಂಬಿತರಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.</p>.<p>ಬಿಪಿಎಲ್ ಕುಟುಂಬದವರಿಗೆ ಹೀಗೆ ಪರಿಹಾರ ನೀಡುವ ಯೋಜನೆ ಘೋಷಿಸಿರುವ ಮೊದಲ ರಾಜ್ಯ ಕರ್ನಾಟಕ. 30 ಸಾವಿರ ಕುಟುಂಬ<br />ಗಳಿಗೆ ಇದರ ಪ್ರಯೋಜನ ಸಿಗಲಿದ್ದು, ಇದಕ್ಕಾಗಿ ₹300 ಕೋಟಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.</p>.<p>ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ನಡೆಸಿದ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ನಿರ್ಧಾರ ಪ್ರಕಟಿಸಿದರು.</p>.<p>ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸೀಮಿತವಾಗುವಂತೆ ಈ ಪರಿಹಾರ ಸಿಗಲಿದೆ ಎಂದು ಯಡಿಯೂರಪ್ಪ ತಿಳಿಸಿದರು.</p>.<p>ಯಾವುದೇ ಬಿಪಿಎಲ್ ಕುಟುಂಬಗಳಲ್ಲಿ ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳು ಮೃತಪಟ್ಟಿದ್ದರೂ, ಆ ಕುಟುಂಬದ ದುಡಿಯುವ– ವಯಸ್ಕರ ಹೆಸರಿನಲ್ಲಿ ಪರಿಹಾರದ ಮೊತ್ತ ನೀಡಲಾಗುತ್ತದೆ ಎಂದು ತಿಳಿಸಿದರು.</p>.<p>‘ಕೋವಿಡ್ನಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ತುತ್ತಾಗಿವೆ. ಅವರ ನೆರವಿಗಾಗಿ ಈ ಪರಿಹಾರ ನೀಡಲಾಗುತ್ತಿದೆ. ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ’ ಎಂದರು.</p>.<p>‘ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡಲಾಗುತ್ತಿದೆ. ಬೇರೆ ಯಾವುದೇ ರಾಜ್ಯಗಳಲ್ಲೂ ಕೋವಿಡ್ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿಲ್ಲ’ ಎಂದು ಯಡಿಯೂರಪ್ಪ ಹೇಳಿದರು.</p>.<p>‘ಕೋವಿಡ್ ಇರುವವರೆಗೆ ಈ ಯೋಜನೆಯನ್ನು ಮುಂದುವರಿಸಲು ಉದ್ದೇಶಿಸಲಾಗಿದೆ. ಕೋವಿಡ್ ಲಸಿಕೆಗಾಗಿ ನಿಗದಿ ಮಾಡಿದ್ದ ಹಣವನ್ನು ಇದಕ್ಕೆ ಬಳಸಲಾಗುವುದು. ಕೇಂದ್ರ ಸರ್ಕಾರ ಲಸಿಕೆ ಖರೀದಿಸಿ ಕೊಡುವುದರಿಂದ, ರಾಜ್ಯಕ್ಕೆ ಆರ್ಥಿಕ ಹೊರೆ ಕಡಿಮೆ ಆಗಲಿದೆ’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಕೋವಿಡ್ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಒಳಗಾದ ದುಡಿಯುವ ವರ್ಗಕ್ಕೆ ಯಡಿಯೂರಪ್ಪ ಅವರು ಕ್ರಮವಾಗಿ ₹1,250 ಕೋಟಿ ಮತ್ತು ₹500 ಕೋಟಿಯನ್ನು ಎರಡು ಪ್ಯಾಕೇಜ್ಗಳಲ್ಲಿ ಪ್ರಕಟಿಸಿದ್ದಾರೆ.</p>.<p><strong>ಪ್ರವಾಸಿ ಗೈಡ್ಗಳಿಗೆ ₹5 ಸಾವಿರ ಪರಿಹಾರ:</strong></p>.<p>ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಪ್ರವಾಸಿ ಗೈಡ್ಗಳಿಗೆ ಕೋವಿಡ್ ಸಂಕಷ್ಟದ ಕಾರಣ ತಲಾ ₹ 5,000 ಪರಿಹಾರ ನೀಡಲು ನಿರ್ಧರಿಸಿರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ತಿಳಿಸಿದ್ದಾರೆ.</p>.<p>ಇಲಾಖೆಯಲ್ಲಿ ನೋಂದಾಯಿತ 384 ನೋಂದಾಯಿತ ಪ್ರವಾಸಿ ಗೈಡ್ಗಳಿದ್ದು, ಅವರೆಲ್ಲ ಸಂಕಷ್ಟದಲ್ಲಿದ್ದಾರೆ ಎಂದು ಅವರು ತಿಳಿಸಿದರು.</p>.<p>ಹೋಟೆಲ್ ಕಾರ್ಮಿಕರಿಗೆ ತಲಾ ₹3,000 ಪರಿಹಾರ ನೀಡಲು ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅತಿ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಚಿವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ಶ್ರಮಜೀವಿ ವರ್ಗಕ್ಕೆ ಎರಡು ಆರ್ಥಿಕ ಪ್ಯಾಕೇಜ್ಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ, ಕುಟುಂಬವನ್ನು ಆರ್ಥಿಕವಾಗಿ ಸಲುಹುವ ವ್ಯಕ್ತಿ ಕೋವಿಡ್ನಿಂದ ಮೃತಪಟ್ಟಿದ್ದರೆ ಅಂತಹವರ ಅವಲಂಬಿತರಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.</p>.<p>ಬಿಪಿಎಲ್ ಕುಟುಂಬದವರಿಗೆ ಹೀಗೆ ಪರಿಹಾರ ನೀಡುವ ಯೋಜನೆ ಘೋಷಿಸಿರುವ ಮೊದಲ ರಾಜ್ಯ ಕರ್ನಾಟಕ. 30 ಸಾವಿರ ಕುಟುಂಬ<br />ಗಳಿಗೆ ಇದರ ಪ್ರಯೋಜನ ಸಿಗಲಿದ್ದು, ಇದಕ್ಕಾಗಿ ₹300 ಕೋಟಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.</p>.<p>ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ನಡೆಸಿದ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ನಿರ್ಧಾರ ಪ್ರಕಟಿಸಿದರು.</p>.<p>ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸೀಮಿತವಾಗುವಂತೆ ಈ ಪರಿಹಾರ ಸಿಗಲಿದೆ ಎಂದು ಯಡಿಯೂರಪ್ಪ ತಿಳಿಸಿದರು.</p>.<p>ಯಾವುದೇ ಬಿಪಿಎಲ್ ಕುಟುಂಬಗಳಲ್ಲಿ ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳು ಮೃತಪಟ್ಟಿದ್ದರೂ, ಆ ಕುಟುಂಬದ ದುಡಿಯುವ– ವಯಸ್ಕರ ಹೆಸರಿನಲ್ಲಿ ಪರಿಹಾರದ ಮೊತ್ತ ನೀಡಲಾಗುತ್ತದೆ ಎಂದು ತಿಳಿಸಿದರು.</p>.<p>‘ಕೋವಿಡ್ನಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ತುತ್ತಾಗಿವೆ. ಅವರ ನೆರವಿಗಾಗಿ ಈ ಪರಿಹಾರ ನೀಡಲಾಗುತ್ತಿದೆ. ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ’ ಎಂದರು.</p>.<p>‘ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡಲಾಗುತ್ತಿದೆ. ಬೇರೆ ಯಾವುದೇ ರಾಜ್ಯಗಳಲ್ಲೂ ಕೋವಿಡ್ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿಲ್ಲ’ ಎಂದು ಯಡಿಯೂರಪ್ಪ ಹೇಳಿದರು.</p>.<p>‘ಕೋವಿಡ್ ಇರುವವರೆಗೆ ಈ ಯೋಜನೆಯನ್ನು ಮುಂದುವರಿಸಲು ಉದ್ದೇಶಿಸಲಾಗಿದೆ. ಕೋವಿಡ್ ಲಸಿಕೆಗಾಗಿ ನಿಗದಿ ಮಾಡಿದ್ದ ಹಣವನ್ನು ಇದಕ್ಕೆ ಬಳಸಲಾಗುವುದು. ಕೇಂದ್ರ ಸರ್ಕಾರ ಲಸಿಕೆ ಖರೀದಿಸಿ ಕೊಡುವುದರಿಂದ, ರಾಜ್ಯಕ್ಕೆ ಆರ್ಥಿಕ ಹೊರೆ ಕಡಿಮೆ ಆಗಲಿದೆ’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಕೋವಿಡ್ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಒಳಗಾದ ದುಡಿಯುವ ವರ್ಗಕ್ಕೆ ಯಡಿಯೂರಪ್ಪ ಅವರು ಕ್ರಮವಾಗಿ ₹1,250 ಕೋಟಿ ಮತ್ತು ₹500 ಕೋಟಿಯನ್ನು ಎರಡು ಪ್ಯಾಕೇಜ್ಗಳಲ್ಲಿ ಪ್ರಕಟಿಸಿದ್ದಾರೆ.</p>.<p><strong>ಪ್ರವಾಸಿ ಗೈಡ್ಗಳಿಗೆ ₹5 ಸಾವಿರ ಪರಿಹಾರ:</strong></p>.<p>ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಪ್ರವಾಸಿ ಗೈಡ್ಗಳಿಗೆ ಕೋವಿಡ್ ಸಂಕಷ್ಟದ ಕಾರಣ ತಲಾ ₹ 5,000 ಪರಿಹಾರ ನೀಡಲು ನಿರ್ಧರಿಸಿರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ತಿಳಿಸಿದ್ದಾರೆ.</p>.<p>ಇಲಾಖೆಯಲ್ಲಿ ನೋಂದಾಯಿತ 384 ನೋಂದಾಯಿತ ಪ್ರವಾಸಿ ಗೈಡ್ಗಳಿದ್ದು, ಅವರೆಲ್ಲ ಸಂಕಷ್ಟದಲ್ಲಿದ್ದಾರೆ ಎಂದು ಅವರು ತಿಳಿಸಿದರು.</p>.<p>ಹೋಟೆಲ್ ಕಾರ್ಮಿಕರಿಗೆ ತಲಾ ₹3,000 ಪರಿಹಾರ ನೀಡಲು ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅತಿ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಚಿವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>