ವಿಧಾನಸಭೆಯಲ್ಲಿ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಷಯ ಪ್ರಸ್ತಾಪಿಸಿದ ಅವರು, ‘ಅಂದಿನ ರಾಷ್ಟ್ರಪತಿ ಮೂಲಕ 7 ರಾಜ್ಯಗಳ ಸರ್ಕಾರಗಳನ್ನು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರದ ನೇತಾರರು ವಿಸರ್ಜಿಸಿದರು. ರಾಷ್ಟ್ರಪತಿ ಆಡಳಿತವನ್ನು ಹೇರಿ, ದೇಶದ ದಾರಿ ತಪ್ಪಿಸಿದರು. ಇದರಿಂದಾಗಿ ಸಂಸತ್ ಮತ್ತು ವಿಧಾನಸಭೆಗಳಿಗೆ ಬೇರೆ ಬೇರೆ ಕಾಲದಲ್ಲಿ ಚುನಾವಣೆ ನಡೆಯಲು ಆರಂಭವಾಯಿತು’ ಎಂದು ಹೇಳಿದರು.