‘ಗ್ರಾಮೀಣ ಪ್ರದೇಶಗಳು ಮತ್ತು ಮಳೆಗಾಲ ಆಗಿರುವುದರಿಂದ ಮಲೆನಾಡು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಮಕ್ಕಳಿಗೆ ಆನ್ಲೈನ್ ಬೋಧನೆಗೆ, ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆ ಆಗಿದೆ. ಈ ಕುರಿತು ತ್ವರಿತವಾಗಿ ಗಮನಹರಿಸುವ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟ ಕಾಪಾಡಬೇಕಾಗಿದೆ. ಮುಖ್ಯಮಂತ್ರಿ ಕೂಡಾ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.