ಆನ್ಲೈನ್ ಜೂಜು ನಿಯಂತ್ರಣಕ್ಕೆ ನಿಯಮಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ದಾವಣಗೆರೆಯ ಡಿ.ಆರ್. ಶಾರದಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಕೋರಿಕೆಯಂತೆ ಹಲವು ಬಾರಿ ವಿಚಾರಣೆ ಮುಂದೂಡಲಾಗಿತ್ತು. ಮಂಗಳವಾರದ ವಿಚಾರಣೆ ವೇಳೆಯೂ ಸರ್ಕಾರ, ತನ್ನ ನಿಲುವು ಸ್ಪಷ್ಟಪಡಿಸಲಿಲ್ಲ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ಹೇಳಿಕೆ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತು.