<p><strong>ಬೆಂಗಳೂರು</strong>: ಆನ್ಲೈನ್ ಜೂಜಾಟದ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.</p>.<p>ನಿಯಮಾವಳಿ ರೂಪಿಸುವ ತನಕ ಎಲ್ಲಾ ರೀತಿಯ ಆನ್ಲೈನ್ ಜೂಜಾಟ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>‘ಕೋವಿಡ್ ಸಂದರ್ಭದಲ್ಲಿ ಮೋಸದ ಆನ್ಲೈನ್ ಜೂಜಿಗೆ ಯುವ ಸಮೂಹ ಬಲಿಯಾಗುತ್ತಿದ್ದಾರೆ. ನಿಯಮಾವಳಿ ರೂಪಿಸುವಂತೆ ಮನವಿ ಮಾಡಿದ್ದರೂ ಸರ್ಕಾರ ಪರಿಗಣಿಸಿಲ್ಲ’ ಎಂದು ಅರ್ಜಿದಾರರಾದ ದಾವಣಗೆರೆಯ ಡಿ.ಆರ್. ಶಾರದಾ ಆರೋಪಿಸಿದ್ದಾರೆ.</p>.<p>‘ಮುಂಬೈನ ಆನ್ಲೈನ್ ರಮ್ಮಿ ಫೌಂಡೇಷನ್(ಟಿಒಆರ್ಎಫ್) ಅನ್ನು ಪ್ರತಿವಾದಿಯಾಗಿ ಸೇರ್ಪಡೆ ಮಾಡಲಾಗಿದೆ. ಕೇಂದ್ರ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡುವ ಮುನ್ನ ರಾಜ್ಯ ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿಲುವು ದಾಖಲಿಸಬೇಕು’ ಎಂದು ಪೀಠ ತಿಳಿಸಿತು. ಜೂ.22 ತನಕ ಸಮಯ ನೀಡಿ ವಿಚಾರಣೆ ಮುಂದೂಡಿತು.</p>.<p>‘ರಮ್ಮಿ ಒಂದು ಕೌಶಲದ ಆಟವೇ ಹೊರತು ಜೂಜಲ್ಲ. ದಂಡದ ನಿಬಂಧನೆಗಳಿಂದ ಈ ಆಟ ಮುಕ್ತವಾಗಿದೆ.ಆಟಗಾರರ ಆಸಕ್ತಿಗಳನ್ನು ರಕ್ಷಿಸುವ ಕೆಲಸವನ್ನು ಫೆಡರೇಷನ್ ಮಾಡುತ್ತಿದೆ’ ಎಂದು ಟಿಒಆರ್ಎಫ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆನ್ಲೈನ್ ಜೂಜಾಟದ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.</p>.<p>ನಿಯಮಾವಳಿ ರೂಪಿಸುವ ತನಕ ಎಲ್ಲಾ ರೀತಿಯ ಆನ್ಲೈನ್ ಜೂಜಾಟ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>‘ಕೋವಿಡ್ ಸಂದರ್ಭದಲ್ಲಿ ಮೋಸದ ಆನ್ಲೈನ್ ಜೂಜಿಗೆ ಯುವ ಸಮೂಹ ಬಲಿಯಾಗುತ್ತಿದ್ದಾರೆ. ನಿಯಮಾವಳಿ ರೂಪಿಸುವಂತೆ ಮನವಿ ಮಾಡಿದ್ದರೂ ಸರ್ಕಾರ ಪರಿಗಣಿಸಿಲ್ಲ’ ಎಂದು ಅರ್ಜಿದಾರರಾದ ದಾವಣಗೆರೆಯ ಡಿ.ಆರ್. ಶಾರದಾ ಆರೋಪಿಸಿದ್ದಾರೆ.</p>.<p>‘ಮುಂಬೈನ ಆನ್ಲೈನ್ ರಮ್ಮಿ ಫೌಂಡೇಷನ್(ಟಿಒಆರ್ಎಫ್) ಅನ್ನು ಪ್ರತಿವಾದಿಯಾಗಿ ಸೇರ್ಪಡೆ ಮಾಡಲಾಗಿದೆ. ಕೇಂದ್ರ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡುವ ಮುನ್ನ ರಾಜ್ಯ ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿಲುವು ದಾಖಲಿಸಬೇಕು’ ಎಂದು ಪೀಠ ತಿಳಿಸಿತು. ಜೂ.22 ತನಕ ಸಮಯ ನೀಡಿ ವಿಚಾರಣೆ ಮುಂದೂಡಿತು.</p>.<p>‘ರಮ್ಮಿ ಒಂದು ಕೌಶಲದ ಆಟವೇ ಹೊರತು ಜೂಜಲ್ಲ. ದಂಡದ ನಿಬಂಧನೆಗಳಿಂದ ಈ ಆಟ ಮುಕ್ತವಾಗಿದೆ.ಆಟಗಾರರ ಆಸಕ್ತಿಗಳನ್ನು ರಕ್ಷಿಸುವ ಕೆಲಸವನ್ನು ಫೆಡರೇಷನ್ ಮಾಡುತ್ತಿದೆ’ ಎಂದು ಟಿಒಆರ್ಎಫ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>