ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ, ‘ರಾಜಕಾರಣದಲ್ಲಿ ಒಮ್ಮೊಮ್ಮೆ ಅಸಮಾಧಾನ ಅಥವಾ ಬೇಸರ ಇರುತ್ತದೆ. ಅದೇನು ದೊಡ್ಡ ವಿಷಯವೇನಲ್ಲ. ರಮೇಶ ಅವರೇ ಮತ್ತೊಮ್ಮೆ ಸಚಿವರಾಗಬೇಕು ಎನ್ನುವ ಆಸೆ ನಮ್ಮದಾಗಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತಿದ್ದೇವೆ. ಕೆಲವೊಂದು ಕಾನೂನು ತೊಡಕುಗಳಿವೆ. ಅದನ್ನೂ ಸರಿಪಡಿಸಿಕೊಳ್ಳಲು ಯತ್ನಿಸುತ್ತಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.