ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಕಾಲಕ್ಕೆ ಪರೀಕ್ಷೆ: ಗೊಂದಲದಲ್ಲಿ ವಿದ್ಯಾರ್ಥಿಗಳು

Last Updated 30 ಮಾರ್ಚ್ 2021, 17:57 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ)–2021 ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ಬಿ.ಇಡಿ ಪ್ರವೇಶ ಪರೀಕ್ಷೆಯು ಒಂದೇ ದಿನ ನಿಗದಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

‘ಎರಡೂ ಪರೀಕ್ಷೆಗಳು ಏಪ್ರಿಲ್‌ 11ಕ್ಕೆ ನಿಗದಿಯಾಗಿವೆ. ಕೆಎಸ್‌ಇಟಿ ಪರೀಕ್ಷೆ ಬರೆಯಲು ಇಚ್ಛಿಸುವವರು ಬಿ.ಇಡಿ ಪ್ರವೇಶ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಳ್ಳಬೇಕಾಗಿದೆ. ಇದರಿಂದ ಸಾವಿರಾರು ಮಂದಿಗೆ ತೊಂದರೆಯಾಗಿದೆ. ಹೀಗಾಗಿ ಮೈಸೂರು ವಿಶ್ವವಿದ್ಯಾಲಯವು ಕೆಎಸ್‌ಇಟಿ ಪರೀಕ್ಷೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಬೇಕು. ಹಾಗಾದಾಗ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲು ಅನುವಾಗುತ್ತದೆ’ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT