ದೇವದುರ್ಗ ಪ್ರವಾಸಿ ಮಂದಿರದಲ್ಲಿ ನಡೆದಿತ್ತು ಎನ್ನಲಾದ ಮಾತುಕತೆಯ ರೆಕಾರ್ಡಿಂಗ್ ಅನ್ನೂ ಶರಣಗೌಡ ಪೊಲೀಸರಿಗೆ ನೀಡಿದ್ದರು. ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್, ಜೆ. ಪ್ರೀತಂ ಗೌಡ ಮತ್ತು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ಅವರ ರಾಜಕೀಯ ಸಲಹೆಗಾರರಾಗಿದ್ದ ಪತ್ರಕರ್ತ ಎಂ.ಬಿ. ಮರಂಕಲ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.