<p><strong>ಬೆಂಗಳೂರು: </strong>‘ವಿಧಾನ ಮಂಡಲ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ನಿಷೇಧ ಕಾಯ್ದೆಯ ಮಸೂದೆ ಮಂಡಿಸಿದರೆ ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>‘ಸೋಮವಾರದಿಂದ (ಡಿ. 7) ಅಧಿವೇಶನ ನಡೆಯಲಿರುವುದರಿಂದ ಉಭಯ ಸದನಗಳ ಪಕ್ಷದ ಹಿರಿಯ ಸದಸ್ಯರ ಸಭೆ ಕರೆದಿದ್ದೆ. ಅಧಿವೇಶನದ ಕಾರ್ಯಸೂಚಿ ಇನ್ನೂ ಆಗಿಲ್ಲ. ಅಧಿವೇಶನದಲ್ಲಿ ಏನೇನು ಚರ್ಚೆ ಮಾಡಬೇಕು ಅಂದುಕೊಂಡಿದ್ದಾರೊ ಗೊತ್ತಿಲ್ಲ’ ಎಂದರು.</p>.<p>‘ಕಳೆದ ಬಾರಿಯ ನೆರೆ ಹಾವಳಿಯಿಂದ ಸಂತ್ರಸ್ತರಾದವರಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಈಗ ಬಿಜೆಪಿಯವರು ಹೊಸ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದ್ದಾರೆ. ಮನೆಗಳನ್ನು ಕಟ್ಟಲು ಅನುದಾನ ಕೊಟ್ಟಿಲ್ಲ. ಅವರಿಗೆ ಬೇಕಾದವರಿಗೆ ಅನುದಾನ ಕೊಡಲು ಅನ್ ಲಾಕ್ ಮಾಡುತ್ತಾರೆ. ಬೇಡದವರಿಗೆ ಕೊಡಲ್ಲ’ ಎಂದು ದೂರಿದರು.</p>.<p>‘ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆ ತರಲು ಬಿಜೆಪಿ ಕಾರ್ಯಕಾರಿಣಿಯಲ್ಲಿ ಚರ್ಚೆ ಮಾಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಇಂಥ ಸಂಧರ್ಭದಲ್ಲಿ ಈ ರೀತಿಯ ಕಾಯ್ದೆ ತರಲು ಅವಕಾಶ ಇಲ್ಲ. ಈ ಕಾಯ್ದೆಗಳು ಜನರ ಮೇಲೆ ಪರಿಣಾಮ ಬೀರಲಿದೆ’ ಎಂದರು.</p>.<p>‘ಸರ್ಕಾರ ಎಷ್ಟು ಸಾಲ ತೆಗೆದುಕೊಂಡಿದೆ. ರಾಜ್ಯದ ಆರ್ಥಿಕ ಸ್ಥಿತಿ ಹೇಗಿದೆ ಎಂಬ ಬಗ್ಗೆ ಸರ್ಕಾರ ಶ್ವೇತ ಪತ್ರ ಮಂಡಿಸಬೇಕು’ ಎಂದೂ ಸಿದ್ದರಾಮಯ್ಯ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ವಿಧಾನ ಮಂಡಲ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ನಿಷೇಧ ಕಾಯ್ದೆಯ ಮಸೂದೆ ಮಂಡಿಸಿದರೆ ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>‘ಸೋಮವಾರದಿಂದ (ಡಿ. 7) ಅಧಿವೇಶನ ನಡೆಯಲಿರುವುದರಿಂದ ಉಭಯ ಸದನಗಳ ಪಕ್ಷದ ಹಿರಿಯ ಸದಸ್ಯರ ಸಭೆ ಕರೆದಿದ್ದೆ. ಅಧಿವೇಶನದ ಕಾರ್ಯಸೂಚಿ ಇನ್ನೂ ಆಗಿಲ್ಲ. ಅಧಿವೇಶನದಲ್ಲಿ ಏನೇನು ಚರ್ಚೆ ಮಾಡಬೇಕು ಅಂದುಕೊಂಡಿದ್ದಾರೊ ಗೊತ್ತಿಲ್ಲ’ ಎಂದರು.</p>.<p>‘ಕಳೆದ ಬಾರಿಯ ನೆರೆ ಹಾವಳಿಯಿಂದ ಸಂತ್ರಸ್ತರಾದವರಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಈಗ ಬಿಜೆಪಿಯವರು ಹೊಸ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದ್ದಾರೆ. ಮನೆಗಳನ್ನು ಕಟ್ಟಲು ಅನುದಾನ ಕೊಟ್ಟಿಲ್ಲ. ಅವರಿಗೆ ಬೇಕಾದವರಿಗೆ ಅನುದಾನ ಕೊಡಲು ಅನ್ ಲಾಕ್ ಮಾಡುತ್ತಾರೆ. ಬೇಡದವರಿಗೆ ಕೊಡಲ್ಲ’ ಎಂದು ದೂರಿದರು.</p>.<p>‘ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆ ತರಲು ಬಿಜೆಪಿ ಕಾರ್ಯಕಾರಿಣಿಯಲ್ಲಿ ಚರ್ಚೆ ಮಾಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಇಂಥ ಸಂಧರ್ಭದಲ್ಲಿ ಈ ರೀತಿಯ ಕಾಯ್ದೆ ತರಲು ಅವಕಾಶ ಇಲ್ಲ. ಈ ಕಾಯ್ದೆಗಳು ಜನರ ಮೇಲೆ ಪರಿಣಾಮ ಬೀರಲಿದೆ’ ಎಂದರು.</p>.<p>‘ಸರ್ಕಾರ ಎಷ್ಟು ಸಾಲ ತೆಗೆದುಕೊಂಡಿದೆ. ರಾಜ್ಯದ ಆರ್ಥಿಕ ಸ್ಥಿತಿ ಹೇಗಿದೆ ಎಂಬ ಬಗ್ಗೆ ಸರ್ಕಾರ ಶ್ವೇತ ಪತ್ರ ಮಂಡಿಸಬೇಕು’ ಎಂದೂ ಸಿದ್ದರಾಮಯ್ಯ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>