<p><strong>ಶಿರಾ: </strong> ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ಬಂಜಾರ ಸಮುದಾಯದವರು ಶನಿವಾರ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಿಲಾರದಹಳ್ಳಿ ತಾಂಡಾದಲ್ಲಿ ಪ್ರತಿಭಟನೆ ನಡೆಸಿದರು.</p>.<p>ವಿಧಾನಸಭಾ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಸಮುದಾಯ, ಯಾವುದೇ ರಾಜಕೀಯ ಪಕ್ಷದವರು ಮತ್ತು ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶ ಮಾಡದಂತೆ ಗ್ರಾಮದಲ್ಲಿ ಫ್ಲೆಕ್ಸ್ ಹಾಕಿದ್ದಾರೆ. ಕಿಲಾರದಹಳ್ಳಿ ತಾಂಡಾವು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದೆ. </p>.<p>ಒಳ ಮೀಸಲಾತಿ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ.</p>.<p>‘ಸರ್ಕಾರದ ನಿಲುವಿನಿಂದ ಲಂಬಾಣಿ ಜನಾಂಗಕ್ಕೆ ಅನ್ಯಾಯವಾಗಲಿದೆ. ಮೀಸಲಾತಿ ನಮ್ಮ ಹಕ್ಕು, ಭಿಕ್ಷೆಯಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸು ವಾಪಸ್ ಪಡೆಯಬೇಕು’ ಎಂದರು. ಶಿರಾ ತಾಲ್ಲೂಕು ಲಂಬಾಣಿ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್. ಶೇಷ ನಾಯಕ್, ಚಂದ್ರನಾಯಕ್ ಪಾಲ್ಗೊಂಡಿದ್ದರು.</p>.<p>ಧಾರವಾಡ: ಸದಾಶಿವ ಆಯೋಗ ವರದಿ ಜಾರಿಯಿಂದ ಸಮುದಾಯಕ್ಕಿದ್ದ ಮೀಸಲಾತಿ ಸೌಲಭ್ಯ ಕಡಿತಗೊಂಡಿದೆ ಎಂದು ಆರೋಪಿಸಿ ಬಂಜಾರ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನಾ ರ್ಯಾಲಿ ನಡೆಸಿದರು.</p>.<p>ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀ ಸೇವಾಲಾಲ ಲಂಬಾಣಿ ಹಿತವರ್ಧಕ ಸಂಘದ ಪದಾಧಿಕಾರಿಗಳು, ಯುವಕರು ಹಾಗೂ ಮುಖಂಡರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡರು. ಜಾಥಾದುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong> ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ಬಂಜಾರ ಸಮುದಾಯದವರು ಶನಿವಾರ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಿಲಾರದಹಳ್ಳಿ ತಾಂಡಾದಲ್ಲಿ ಪ್ರತಿಭಟನೆ ನಡೆಸಿದರು.</p>.<p>ವಿಧಾನಸಭಾ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಸಮುದಾಯ, ಯಾವುದೇ ರಾಜಕೀಯ ಪಕ್ಷದವರು ಮತ್ತು ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶ ಮಾಡದಂತೆ ಗ್ರಾಮದಲ್ಲಿ ಫ್ಲೆಕ್ಸ್ ಹಾಕಿದ್ದಾರೆ. ಕಿಲಾರದಹಳ್ಳಿ ತಾಂಡಾವು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದೆ. </p>.<p>ಒಳ ಮೀಸಲಾತಿ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ.</p>.<p>‘ಸರ್ಕಾರದ ನಿಲುವಿನಿಂದ ಲಂಬಾಣಿ ಜನಾಂಗಕ್ಕೆ ಅನ್ಯಾಯವಾಗಲಿದೆ. ಮೀಸಲಾತಿ ನಮ್ಮ ಹಕ್ಕು, ಭಿಕ್ಷೆಯಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸು ವಾಪಸ್ ಪಡೆಯಬೇಕು’ ಎಂದರು. ಶಿರಾ ತಾಲ್ಲೂಕು ಲಂಬಾಣಿ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್. ಶೇಷ ನಾಯಕ್, ಚಂದ್ರನಾಯಕ್ ಪಾಲ್ಗೊಂಡಿದ್ದರು.</p>.<p>ಧಾರವಾಡ: ಸದಾಶಿವ ಆಯೋಗ ವರದಿ ಜಾರಿಯಿಂದ ಸಮುದಾಯಕ್ಕಿದ್ದ ಮೀಸಲಾತಿ ಸೌಲಭ್ಯ ಕಡಿತಗೊಂಡಿದೆ ಎಂದು ಆರೋಪಿಸಿ ಬಂಜಾರ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನಾ ರ್ಯಾಲಿ ನಡೆಸಿದರು.</p>.<p>ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀ ಸೇವಾಲಾಲ ಲಂಬಾಣಿ ಹಿತವರ್ಧಕ ಸಂಘದ ಪದಾಧಿಕಾರಿಗಳು, ಯುವಕರು ಹಾಗೂ ಮುಖಂಡರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡರು. ಜಾಥಾದುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>