ವರದಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರದ ಮುಂದೆ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿರುವ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಹಿಂದೆ ಮಾಧವ್ ಗಾಡ್ಗೀಳ್ ಸಮಿತಿ ವರದಿ ನೀಡಿತ್ತು. ಅದನ್ನು ಹಲವು ರಾಜ್ಯ ಸರ್ಕಾರಗಳು ವಿರೋಧಿಸಿದ್ದವು. ನಂತರ ಕಸ್ತೂರಿ ರಂಗನ್ ಸಮಿತಿ ನೇಮಿಸಲಾಯಿತು. ಗಾಡ್ಗೀಳ್ ಸಮಿತಿಯ ಶಿಫಾರಸುಗಳನ್ನು ಆದಷ್ಟೂ ತೆಳುವಾಗಿಸಿ, ಪಶ್ಚಿಮ ಘಟ್ಟಗಳಲ್ಲಿ ಮಾನವ ಕೇಂದ್ರಿ ಅಭಿವೃದ್ಧಿ ಚಟುವಟಿಕೆಗಳಿಗೆ ಅವಕಾಶ ನೀಡುವ ಶಿಫಾರಸು ಮಾಡಲಾಗಿತ್ತು’ ಎಂದು ಹೇಳಿದ್ದಾರೆ.