ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಪಿಎಸ್‌: ವಿಧಾನಸಭಾ ಕ್ಷೇತ್ರಗಳಲ್ಲಿ ಹೋರಾಟ

Last Updated 2 ಜನವರಿ 2023, 21:53 IST
ಅಕ್ಷರ ಗಾತ್ರ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆ (ಒ‍ಪಿಎಸ್‌) ಮರು ಜಾರಿಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಎನ್‌ಪಿಎಸ್‌ ನೌಕರರು ನಡೆಸುತ್ತಿದ್ದ ಧರಣಿಯನ್ನು ಸೋಮವಾರ ಅಂತ್ಯಗೊಳಿಸಿದ್ದಾರೆ.

‘ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ’ದ ಆಶ್ರಯದಲ್ಲಿ ಡಿ.19ರಿಂದ ಧರಣಿ ನಡೆಸುತ್ತಿದ್ದರು.

‘ಎನ್‌ಪಿಎಸ್‌ ನೌಕರರ ಸಭೆ ಕರೆಯುವುದಾಗಿ ಸಿ.ಎಂ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ‘ವೋಟ್‌ ಫಾರ್‌ ಒಪಿಎಸ್‌’ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದು ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು ತಿಳಿಸಿದ್ದಾರೆ.

‘ಹಳೆ ಪಿಂಚಣಿ ಯೋಜನೆ ನಮ್ಮ ಹಕ್ಕು’ ಎನ್ನುವ ಘೋಷ ವಾಕ್ಯದೊಂದಿಗೆ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT