ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಪಿಎಸ್: ಹೈಕಮಾಂಡ್ ಜತೆ ಚರ್ಚಿಸಿ ನಿಲುವು ಪ್ರಕಟ: ಸಿದ್ದರಾಮಯ್ಯ

Last Updated 24 ಡಿಸೆಂಬರ್ 2022, 22:30 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಕುರಿತಂತೆ ಪಕ್ಷದ ಹೈಕಮಾಂಡ್ ಜತೆ ಮಾತನಾಡಿ ನಿರ್ಧಾರ ತಿಳಿಸಲಾಗುವುದು. ಸುಳ್ಳು ಭರವಸೆ ನೀಡಲು ಹೋಗುವುದಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಪಡಿಸಿ ಒಪಿಎಸ್‌ ಜಾರಿಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎನ್‌ಪಿಎಸ್‌ ನೌಕರರು ಹಮ್ಮಿಕೊಂಡಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಸರ್ಕಾರಿ ನೌಕರರ ಹಕ್ಕು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಅದಷ್ಟು ಬೇಗ ಪಕ್ಷದ ನಿರ್ಧಾರ ತಿಳಿಸಲಾಗುವುದು. ನಿಮ್ಮ ಜತೆ ನಾನಿದ್ದೇನೆ. ನಿಮ್ಮ ಬೇಡಿಕೆಗೆ ವಿರುದ್ಧ ಇಲ್ಲ’ ಎಂದು ಧರಣಿ ನಿರತರಿಗೆ ಭರವಸೆ ನೀಡಿದರು.

‘ಸರ್ಕಾರಿ ನೌಕರರಿಗೆ ನ್ಯಾಯಯುತ ಸಂಬಳ, ಪಿಂಚಣಿ ಕೊಡಬೇಕು. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿದ್ದೇನೆ. ಒಪಿಎಸ್ ಮಾಡಲು ಸಾಧ್ಯವಿಲ್ಲ ಎಂದು ನನ್ನ ಅಧಿಕಾರವಧಿಯಲ್ಲಿ ಹೇಳಿದ್ದೆ. ಆದರೆ, ಈಗ ಕಾಲ ಬದಲಾಗಿದೆ. ಈಗಾಗಲೇ ಜಾರ್ಖಂಡ್, ಅಸ್ಸಾಂ, ಹಿಮಾಚಲ ಪ್ರದೇಶದಲ್ಲಿ ಒಪಿಎಸ್ ಜಾರಿ ತರಲಾಗಿದೆ. ನಮ್ಮ ಸರ್ಕಾರ ಬಂದರೆ ಜಾರಿಗೆ ತರಲು ಪ್ರಯತ್ನಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT