ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಚುರುಕು | ಏಳು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

Last Updated 17 ಆಗಸ್ಟ್ 2020, 18:57 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು ಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆ.18ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ
ಸಾಧ್ಯತೆ ಇರುವುದರಿಂದ‘ ಆರೆಂಜ್ ಅಲರ್ಟ್’, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ‘ಯೆಲ್ಲೊ ಅಲರ್ಟ್’
ಘೋಷಿಸಲಾಗಿದೆ.

ಎಚ್ಚರಿಕೆ: ಕರಾವಳಿ ಜಿಲ್ಲೆಗಳಲ್ಲಿ ಆ. 21ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಈ ಭಾಗದಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಮಳೆ-ಎಲ್ಲಿ,ಎಷ್ಟು?: ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ 23 ಸೆಂ.ಮೀ ಗರಿಷ್ಠ ಮಳೆಯಾಗಿದೆ.

ಕೊಲ್ಲೂರು 21, ಸಿದ್ದಾಪುರ 19, ಆಗುಂಬೆ 17, ಭಟ್ಕಳ 15, ಕುಂದಾಪುರ 12, ಕೊಪ್ಪ 10, ಬೆಳಗಾವಿ 9, ಕಾರ್ಕಳ, ಅಂಕೋಲಾ 8, ಬೆಳಗಾವಿ, ಶೃಂಗೇರಿ 7, ಬೆಳ್ತಂಗಡಿ, ಸಾಗರ 6, ಮೂಡುಬಿದರೆ, ಉಡುಪಿ, ಬ್ರಹ್ಮಾವರ, ಕಾರವಾರ, ಧಾರವಾಡ, ಸೊರಬ 5, ನಿಪ್ಪಾಣಿ, ಸಕಲೇಶಪುರ 4, ಮಂಗಳೂರು, ಚಿಂಚೋಳಿ, ತರೀಕೆರೆಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT