‘ಕೋವಿಡ್ ಕಾರಣ ಅಂಗಾಂಗ ದಾನ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ಮಕ್ಕಳು ಗಂಭೀರ ಸ್ವರೂಪದ ಯಕೃತ್ ಸಮಸ್ಯೆಯನ್ನು ಎದುರಿಸುತ್ತಿದ್ದರು. ಕಸಿ ಶಸ್ತ್ರಚಿಕಿತ್ಸೆಯನ್ನು ವಿಳಂಬ ಮಾಡಿದ್ದಲ್ಲಿ ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆಗಳಿದ್ದವು. ಹೀಗಾಗಿ, ಅವರ ಪಾಲಕರಿಂದಲೇ ಅಂಗಾಂಗ ಪಡೆದು ಕಸಿ ಮಾಡಲಾಯಿತು. ಈಗ ಎಲ್ಲ ಮಕ್ಕಳು ಚೇತರಿಸಿಕೊಂಡಿದ್ದಾರೆ’ ಎಂದು ಆಸ್ಪತ್ರೆಯ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೀವ್ ಲೋಚನ್ ತಿಳಿಸಿದ್ದಾರೆ.