ವಿಶ್ವನಾಥ್ ಅವರ ಆರೋಪದ ಕುರಿತು ಪ್ರಶ್ನಿಸಿದಾಗ, ‘ನನಗೆ ಪ್ರಾಥಮಿಕ ಮಾಹಿತಿಯೂ ಇಲ್ಲದೆ ತೀರ್ಪು ನೀಡಲು ಅಸಾಧ್ಯ. ಈ ವಿಷಯದ ಬಗ್ಗೆ ಅಧ್ಯಯನ ಮಾಡದೇ ಮಾತನಾಡಲು ಸಾಧ್ಯವಿಲ್ಲ’ ಎಂದರು. ‘ನಮ್ಮ ಪಕ್ಷ ಗೆದ್ದು ಬರಲು ಎಲ್ಲ ಮಠಾಧೀಶರ ಆಶೀರ್ವಾದ ಕಾರಣ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದೆಯೂ ಅವರ ಬೆಂಬಲ ಮತ್ತು ಆಶೀರ್ವಾದವೂ ಬೇಕು. ಆದರೆ, ನಮ್ಮ ಪಕ್ಷಕ್ಕೆ ಜಾತಿ ಇಲ್ಲ. ಜಾತಿ ಕೇಂದ್ರಿತ ಪಕ್ಷವೂ ಅಲ್ಲ. ಪಕ್ಷಕ್ಕೆ ಸಿದ್ಧಾಂತವೇ ಮುಖ್ಯ. ಅದರಿಂದಲೇ ಪಕ್ಷ ಬೆಳೆದಿದೆ’ ಎಂದರು.